ಮೌಢ್ಯ ನಿವಾರಣೆಗೆ ವಿಧವೆ ಮಾಡಿದ ಅಡುಗೆ ತಿಂದ ಜಿಲ್ಲಾಧಿಕಾರಿ 
ದೇಶ

ಮೌಢ್ಯ ನಿವಾರಣೆಗೆ ವಿಧವೆ ಮಾಡಿದ ಅಡುಗೆ ತಿಂದ ಜಿಲ್ಲಾಧಿಕಾರಿ

ದೇಶದಲ್ಲಿ ಮೌಢ್ಯಾಚರಣೆ ಇನ್ನು ಚಾಲ್ತಿಯಲ್ಲಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಪ್ರಾತ್ಯಕ್ಷಿಕ ಘಟನೆ ಬೇಕಿಲ್ಲ. ವಿಧವೆ ಎಂಬ ಕಾರಣಕ್ಕೆ ಆಕೆಯನ್ನು ಶಾಲೆಯಿಂದಲೇ ಬಹಿಷ್ಕಾರ ಮಾಡಿದ ಘಟನೆಯೊಂದು ಬಿಹಾರದ ಗೋಪಾಲ್ಗಂಜ್ ನಲ್ಲಿ ನಡೆದಿದೆ...

ಬಿಹಾರ: ದೇಶದಲ್ಲಿ ಮೌಢ್ಯಾಚರಣೆ ಇನ್ನು ಚಾಲ್ತಿಯಲ್ಲಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಪ್ರಾತ್ಯಕ್ಷಿಕ ಘಟನೆ ಬೇಕಿಲ್ಲ. ವಿಧವೆ ಎಂಬ ಕಾರಣಕ್ಕೆ ಆಕೆಯನ್ನು ಶಾಲೆಯಿಂದಲೇ ಬಹಿಷ್ಕಾರ ಮಾಡಿದ ಘಟನೆಯೊಂದು ಬಿಹಾರದ ಗೋಪಾಲ್ಗಂಜ್ ನಲ್ಲಿ ನಡೆದಿದೆ.

ವಿಧವೆಯೊಬ್ಬಳು ಶಾಲೆಯಲ್ಲಿ ಅಡುಗೆ ಮಾಡುತ್ತಿದ್ದು, ಆಕೆಯನ್ನು ಶಾಲೆಯ ಕೆಲಸದಿಂದ ತೆಗೆದುಹಾಕಬೇಕೆಂದು ಹಾಗೂ ಶಾಲೆಯನ್ನೇ ಮುಚ್ಚಬೇಕೆಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ಮಾಡಿದ್ದಾರೆ. ಸ್ಥಳೀಯರ ಆಗ್ರಹದ ಮೇರೆಗೆ ಶಾಲಾಧಿಕಾರಿಗಳು ಆಕೆಯನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ.

ಇದರಿಂದ ನೊಂದ ಮಹಿಳೆ ಗುರುವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಮೆಟ್ಟಿಲು ಹತ್ತಿ ತನ್ನ ಅಳಲನ್ನು ತೋಡಿಕೊಂಡಿದ್ದಾಳೆ. ಮಹಿಳೆಯ ನೋವನ್ನು ಕೇಳಿದ ಅಲ್ಲಿನ ಜಿಲ್ಲಾಧಿಕಾರಿ ರಾಹುಲ್ ಕುಮಾರ್ ಅವರು ಇಂದು ಶಾಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಸ್ಥಳೀಯರೊಂದಿಗೆ ಮಾತನಾಡಿದ ಅಧಿಕಾರಿ ಅವರನ್ನು ಸಮಾಧಾನಪಡಿಸಿ ಬುದ್ಧಿವಾದ ಹೇಳಿದ್ದಾರೆ. ಅಲ್ಲದೆ, ಜನರಲ್ಲಿರುವ ಮೌಢ್ಯವನ್ನು ಹೋಗಾಲಾಡಿಸುವುದಕ್ಕಾಗಿ ವಿಧವಾ ಮಹಿಳೆ ಮಾಡಿದ ಅಡುಗೆಯನ್ನು ಎಲ್ಲರ ಸಮಕ್ಷಮದಲ್ಲಿ ತಿಂದು ತೋರಿಸಿದ್ದಾರೆ.

ಇದೀಗ ಜಿಲ್ಲಾಧಿಕಾರಿಯ ಮಾತುಗಳನ್ನು ಕೇಳಿರುವ ಅಲ್ಲಿನ ಸ್ಥಳೀಯರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದು, ಶಾಲೆ ಎಂದಿನಂತೆ ನಡೆಯಲು ಬಿಟ್ಟಿದ್ದಾರೆ. ಅಲ್ಲದೆ, ಮಹಿಳೆಯು ಮತ್ತೆ ಶಾಲೆಯಲ್ಲಿ ಕೆಲಸ ಮಾಡಲು ಅನುಮತಿ ನೀಡಿದ್ದಾರೆ.

ಕಲ್ಯಾಣ್ಪುರದಲ್ಲಿರುವ ಈ ಶಾಲೆಯಲ್ಲಿ 1ನೇ ತರಗತಿಯಿಂದ 8 ತರಗತಿಯವರೆಗೂ ಒಟ್ಟು 734 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿಧವಾ ಮಹಿಳೆಗೆ ಇಬ್ಬರು ಮಕ್ಕಳಿದ್ದು,  ಶಾಲೆಯಲ್ಲಿ ಒಟ್ಟು 5 ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಶಾಲೆಯ ಅಧಿಕಾರಿಗಳು ಈ ಮಹಿಳೆಯರಿಗೆ ತಿಂಗಳಿಗೆ ರು.1000 ವೇತನವನ್ನು ನೀಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT