ಮೌಢ್ಯ ನಿವಾರಣೆಗೆ ವಿಧವೆ ಮಾಡಿದ ಅಡುಗೆ ತಿಂದ ಜಿಲ್ಲಾಧಿಕಾರಿ 
ದೇಶ

ಮೌಢ್ಯ ನಿವಾರಣೆಗೆ ವಿಧವೆ ಮಾಡಿದ ಅಡುಗೆ ತಿಂದ ಜಿಲ್ಲಾಧಿಕಾರಿ

ದೇಶದಲ್ಲಿ ಮೌಢ್ಯಾಚರಣೆ ಇನ್ನು ಚಾಲ್ತಿಯಲ್ಲಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಪ್ರಾತ್ಯಕ್ಷಿಕ ಘಟನೆ ಬೇಕಿಲ್ಲ. ವಿಧವೆ ಎಂಬ ಕಾರಣಕ್ಕೆ ಆಕೆಯನ್ನು ಶಾಲೆಯಿಂದಲೇ ಬಹಿಷ್ಕಾರ ಮಾಡಿದ ಘಟನೆಯೊಂದು ಬಿಹಾರದ ಗೋಪಾಲ್ಗಂಜ್ ನಲ್ಲಿ ನಡೆದಿದೆ...

ಬಿಹಾರ: ದೇಶದಲ್ಲಿ ಮೌಢ್ಯಾಚರಣೆ ಇನ್ನು ಚಾಲ್ತಿಯಲ್ಲಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಪ್ರಾತ್ಯಕ್ಷಿಕ ಘಟನೆ ಬೇಕಿಲ್ಲ. ವಿಧವೆ ಎಂಬ ಕಾರಣಕ್ಕೆ ಆಕೆಯನ್ನು ಶಾಲೆಯಿಂದಲೇ ಬಹಿಷ್ಕಾರ ಮಾಡಿದ ಘಟನೆಯೊಂದು ಬಿಹಾರದ ಗೋಪಾಲ್ಗಂಜ್ ನಲ್ಲಿ ನಡೆದಿದೆ.

ವಿಧವೆಯೊಬ್ಬಳು ಶಾಲೆಯಲ್ಲಿ ಅಡುಗೆ ಮಾಡುತ್ತಿದ್ದು, ಆಕೆಯನ್ನು ಶಾಲೆಯ ಕೆಲಸದಿಂದ ತೆಗೆದುಹಾಕಬೇಕೆಂದು ಹಾಗೂ ಶಾಲೆಯನ್ನೇ ಮುಚ್ಚಬೇಕೆಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ಮಾಡಿದ್ದಾರೆ. ಸ್ಥಳೀಯರ ಆಗ್ರಹದ ಮೇರೆಗೆ ಶಾಲಾಧಿಕಾರಿಗಳು ಆಕೆಯನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ.

ಇದರಿಂದ ನೊಂದ ಮಹಿಳೆ ಗುರುವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಮೆಟ್ಟಿಲು ಹತ್ತಿ ತನ್ನ ಅಳಲನ್ನು ತೋಡಿಕೊಂಡಿದ್ದಾಳೆ. ಮಹಿಳೆಯ ನೋವನ್ನು ಕೇಳಿದ ಅಲ್ಲಿನ ಜಿಲ್ಲಾಧಿಕಾರಿ ರಾಹುಲ್ ಕುಮಾರ್ ಅವರು ಇಂದು ಶಾಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಸ್ಥಳೀಯರೊಂದಿಗೆ ಮಾತನಾಡಿದ ಅಧಿಕಾರಿ ಅವರನ್ನು ಸಮಾಧಾನಪಡಿಸಿ ಬುದ್ಧಿವಾದ ಹೇಳಿದ್ದಾರೆ. ಅಲ್ಲದೆ, ಜನರಲ್ಲಿರುವ ಮೌಢ್ಯವನ್ನು ಹೋಗಾಲಾಡಿಸುವುದಕ್ಕಾಗಿ ವಿಧವಾ ಮಹಿಳೆ ಮಾಡಿದ ಅಡುಗೆಯನ್ನು ಎಲ್ಲರ ಸಮಕ್ಷಮದಲ್ಲಿ ತಿಂದು ತೋರಿಸಿದ್ದಾರೆ.

ಇದೀಗ ಜಿಲ್ಲಾಧಿಕಾರಿಯ ಮಾತುಗಳನ್ನು ಕೇಳಿರುವ ಅಲ್ಲಿನ ಸ್ಥಳೀಯರು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದು, ಶಾಲೆ ಎಂದಿನಂತೆ ನಡೆಯಲು ಬಿಟ್ಟಿದ್ದಾರೆ. ಅಲ್ಲದೆ, ಮಹಿಳೆಯು ಮತ್ತೆ ಶಾಲೆಯಲ್ಲಿ ಕೆಲಸ ಮಾಡಲು ಅನುಮತಿ ನೀಡಿದ್ದಾರೆ.

ಕಲ್ಯಾಣ್ಪುರದಲ್ಲಿರುವ ಈ ಶಾಲೆಯಲ್ಲಿ 1ನೇ ತರಗತಿಯಿಂದ 8 ತರಗತಿಯವರೆಗೂ ಒಟ್ಟು 734 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿಧವಾ ಮಹಿಳೆಗೆ ಇಬ್ಬರು ಮಕ್ಕಳಿದ್ದು,  ಶಾಲೆಯಲ್ಲಿ ಒಟ್ಟು 5 ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಶಾಲೆಯ ಅಧಿಕಾರಿಗಳು ಈ ಮಹಿಳೆಯರಿಗೆ ತಿಂಗಳಿಗೆ ರು.1000 ವೇತನವನ್ನು ನೀಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT