ಪಿಯೂಶ್ ಗೋಯೆಲ್ 
ದೇಶ

ಜಿಎಸ್ ಟಿ ಕಾಯ್ದೆ ಪ್ರಯೋಜನ; ಕೇಂದ್ರದಿಂದ ಪರ್ಯಾಯ ಮಾರ್ಗ

ಸರಕು ಮತ್ತು ಸೇವಾ ತೆರಿಗೆ ಮಸೂದೆ(ಜಿಎಸ್ ಟಿ) ಜಾರಿ ವಿಳಂಬವಾಗುತ್ತಿದ್ದು ಮಸೂದೆ ಜಾರಿಯಿಂದಾಗಬೇಕಿದ್ದ ಪ್ರಯೋಜನಗಳನ್ನು ತಲುಪಿಸಲು ಕೇಂದ್ರ ಸರ್ಕಾರ ಪರ್ಯಾಯ ಮಾರ್ಗ ಕಂಡುಕೊಳ್ಳಲಿದೆ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಮಸೂದೆ(ಜಿಎಸ್ ಟಿ) ಜಾರಿ ವಿಳಂಬವಾಗುತ್ತಿದ್ದು ಮಸೂದೆ ಜಾರಿಯಿಂದಾಗಬೇಕಿದ್ದ ಪ್ರಯೋಜನಗಳನ್ನು ತಲುಪಿಸಲು ಕೇಂದ್ರ ಸರ್ಕಾರ ಪರ್ಯಾಯ ಮಾರ್ಗ ಕಂಡುಕೊಳ್ಳಲಿದೆ ಎಂದು  ಕೇಂದ್ರ ಸಚಿವ ಪಿಯೂಶ್ ಗೋಯೆಲ್ ಹೇಳಿದ್ದಾರೆ.
ರೋಟರಿ ಇನ್ಸ್ಟಿಟ್ಯೂಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪಿಯೂಷ್ ಗೋಯೆಲ್,  ಸದ್ಯಕ್ಕೆ ಜಿಎಸ್ ಟಿ ಮಸೂದೆ ಅಂಗೀಕಾರವಾಗದೇ ಇರುವುದರಿಂದ ಉದ್ಯಮ ಹಾಗೂ ಕೈಗಾರಿಕೆಗಳಿಗೆ ಉಂಟಾಗುವ ಸಮಸ್ಯೆಗಳನ್ನು ತಡೆಗಟ್ಟಿ, ಕಾಯ್ದೆಯ ಪ್ರಯೋಜನಗಳನ್ನು ತಲುಪಿಸಲು ಕೇಂದ್ರ ಸರ್ಕಾರ ಪರ್ಯಾಯ ಮಾರ್ಗ ಕಂಡುಕೊಳ್ಳಲು ತೀರ್ಮಾನಿಸಿದೆ.     
ತೆರಿಗೆ ಸುಧಾರಣೆಯಲ್ಲಿನ ಮಹತ್ವದ ಕ್ರಮವಾಗಿರುವ ಜಿಎಸ್ ಟಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದು, ರಾಜ್ಯಸಭೆಯಲ್ಲಿ ಅಂಗೀಕಾರ ದೊರೆಯುವುದು ಬಾಕಿ ಇದೆ. ರಾಜ್ಯಸಭೆಯಲ್ಲಿ ಎನ್ ಡಿಎ ಸರ್ಕಾರಕ್ಕೆ  ಬಹುಮತ ಇಲ್ಲದ ಕಾರಣ ಜಿಎಸ್ ಟಿ ಮಸೂದೆ ಹಾಗೆಯೇ ಉಳಿದಿದೆ. 
ರಾಜ್ಯಸಭೆಯಲ್ಲಿ ಕಾಂಗ್ರೆಸ್, ಇತರ ಕೆಲವು ವಿರೋಧ ಪಕ್ಷಗಳ ಪ್ರತಿಭಟನೆ ನಡೆದು, ಕಲಾಪ ವ್ಯರ್ಥವಾಗುತ್ತಿದ್ದ ಕಾರಣ, ನ.18 ರಂದು ರಾಜ್ಯಸಭಾಧ್ಯಕ್ಷ ಹಮೀದ್ ಅನ್ಸಾರಿ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ನಡೆದಿತ್ತು. ಸರ್ವಪಕ್ಷ ಸಭೆಯಲ್ಲಿ ಜಿಎಸ್ ಟಿ ಮಸೂದೆಯೊಂಡನ್ನು ಹೊರತುಪಡಿಸಿ ಉಳಿದ ಎಲ್ಲಾ ಮಸೂದೆಗಳಿಗೂ ಬೆಂಬಲ ನೀಡುವುದಾಗಿ ವಿಪಕ್ಷಗಳು ತಿಳಿಸಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT