ಸುಬ್ರಮಣಿಯನ್ ಸ್ವಾಮಿ 
ದೇಶ

ರಾಷ್ಟ್ರಗೀತೆ ಬದಲಾವಣೆ ಮಾಡುವಂತೆ ಪ್ರಧಾನಿ ಮೋದಿಗೆ ಸುಬ್ರಮಣಿಯನ್ ಸ್ವಾಮಿ ಒತ್ತಾಯ

ಜನಗಣಮನ ರಾಷ್ಟ್ರಗೀತೆಯಲ್ಲಿ ಬದಲಾವಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಪತ್ರ ಬರೆದಿದ್ದಾರೆ....

ನವದೆಹಲಿ:  ಜನಗಣಮನ ರಾಷ್ಟ್ರಗೀತೆಯಲ್ಲಿ ಬದಲಾವಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಪತ್ರ ಬರೆದಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಬರೆದಿದ್ದ ರಾಷ್ಟ್ರಗೀತೆಯ ಕೆಲವು ಪದಗಳನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದ್ದಾರೆ.

1949 ರ ನವೆಂಬರ್  26 ರಂದು ಶಾಸನ ಸಭೆಯಲ್ಲಿ ರಾಷ್ಟ್ರಗೀತೆ ಅಂಗೀಕಾರ ಮಾಡುವಾಗ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಭವಿಷ್ಯದಲ್ಲಿ ಅಗತ್ಯ ಬಿದ್ದರೆ ಸಂಸತ್ತಿನಲ್ಲಿ ಬದಲಾವಣೆ ಮಾಡಬಹುದು ಎಂದು ಹೇಳಿದ್ದಾರೆ.

ಕೊಲ್ಕೋತ್ತಾದಲ್ಲಿ ಒರಿಜಿನಲ್ ರಾಷ್ಟ್ರಗೀತೆಯನ್ನು ಬದಲಾವಣೆ ಮಾಡಲಾಯಿತು. ಈಗ ಇರುವ ರಾಷ್ಟ್ರಗೀತೆಯನ್ನು ಸಂಪೂರ್ಣ ಬದಲಾವಣೆ ಮಾಡುವುದು ಬೇಡ. ಅದರಲ್ಲಿರುವ ಕೆಲ ಪದಗಳನ್ನು ಬದಲಾಯಿಸುವಂತೆ ಸ್ವಾಮಿ ಪತ್ರದಲ್ಲಿ ಬರೆದಿದ್ದಾರೆ.

ಇಂಡಿಯನ್ ನ್ಯಾಷನಲ್ ಆರ್ಮಿಯಲ್ಲಿದ್ದಾಗ ಸುಭಾಷ್ ಚಂದ್ರ ಬೋಸ್ ರಾಷ್ಟ್ರಗೀತೆಯಲ್ಲಿ ಸಂಸ್ಕೃತ ಪದಗಳನ್ನು ಸೇರಿಸಿದ್ದರು. ಅನಂತರ ಬ್ರಿಟಿಷ್ ದೊರೆ ಅದರಲ್ಲಿನ ಕೆಲ ಪದಗಳನ್ನು ಬದಲಾಯಿಸಿದರು ಎಂದು ಸ್ವಾಮಿ ತಿಳಿಸಿದ್ದಾರೆ.   


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT