ದಾವೂದ್ ಇಬ್ರಾಹಿಂ ಅವರ ಕಾರು 
ದೇಶ

ಹರಾಜು ಮೂಲಕ ಖರೀದಿಸಿದ ದಾವೂದ್‌ನ ಕಾರಿಗೆ ಸಾರ್ವಜನಿಕವಾಗಿ ಅಗ್ನಿಸ್ಪರ್ಶ

ಭೂಗತ ಲೋಕದ ದೊರೆ ದಾವೂದ್ ಇಬ್ರಾಹಿಂ ಅವರ ಕಾರನ್ನು ಹರಾಜು ಮೂಲಕ ಖರೀದಿಸಿದ್ದ ಹಿಂದೂ ಮಹಾಸಭಾ ಆ ಕಾರನ್ನು ಬುಧವಾರ...

ಮುಂಬೈ: ಭೂಗತ ಲೋಕದ ದೊರೆ ದಾವೂದ್ ಇಬ್ರಾಹಿಂ ಅವರ ಕಾರನ್ನು ಹರಾಜು ಮೂಲಕ ಖರೀದಿಸಿದ್ದ ಹಿಂದೂ ಮಹಾಸಭಾ ಆ ಕಾರನ್ನು ಬುಧವಾರ ಮಧ್ಯಾಹ್ನ 1 ಗಂಟೆಗೆ ಸುಡಲಿದೆ .ಗಾಜಿಯಾಬಾದ್‌ನ ಇಂದರಾಪುರದಲ್ಲಿ ಸಾರ್ವಜನಿಕವಾಗಿ ಕಾರನ್ನು ಸುಡಲು ತೀರ್ಮಾನಿಸಿರುವುದಾಗಿ ಸ್ವಾಮಿ ಚಕ್ರಪಾಣಿ ತಿಳಿಸಿದ್ದಾರೆ.
ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರು ದೇಶದಲ್ಲಿ ನಡೆಸಿದ ಭಯೋತ್ಪಾದನಾ ಕೃತ್ಯಗಳಿಗೆ ಅಂತ್ಯಕರ್ಮ ಮಾಡುವ ಸಂಕೇತವಾಗಿ ಈ ಕಾರನ್ನು ಸುಡಲಾಗುತ್ತಿದೆ. ಈ ಹಿಂದೆ ಆ ಕಾರನ್ನು ಆ್ಯಂಬುಲೆನ್ಸ್ ಮಾಡುವ ಬಗ್ಗೆ ಯೋಚಿಸಲಾಗಿತ್ತು. ಆದಾಗ್ಯೂ, ಈ ಕಾರು ಖರೀದಿಸಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಡಿ ಕಂಪನಿ ಬೆದರಿಕೆಯನಿನು ಒಡ್ಡಿತ್ತು. ಇದೀಗ ಅವರಿಗೆ ತಕ್ಕ ಉತ್ತರ ನೀಡುವುದಕ್ಕಾಗಿಯೇ ಕಾರನ್ನು ಭಸ್ಮಗೊಳಿಸಲಾಗುತ್ತದೆ ಎಂದು ಚಕ್ರಪಾಣಿ ಹೇಳಿದ್ದಾರೆ.
ರು. 15,700 ಮೂಲ ಬೆಲೆಯಿದ್ದ ಕಾರನ್ನು ರು. 3.2 ಲಕ್ಷ ಬೆಲೆ ತೆತ್ತು ಹಿಂದೂ ಮಹಾಸಭಾ ಖರೀದಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT