ಅರುಣ್ ಜೇಟ್ಲಿ - ಅರವಿಂದ್ ಕೇಜ್ರಿವಾಲ್ 
ದೇಶ

ಕೀಳು ಮಟ್ಟದ ಹೇಳಿಕೆ ನೀಡುವ ಹಕ್ಕು ಕೇಜ್ರಿವಾಲ್, ಎಎಪಿ ನಾಯಕರಿಗಿಲ್ಲ: ಜೇಟ್ಲಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಜನ ಕೀಳು ಮಟ್ಟದ ಹೇಳಿಕೆಗಳನ್ನು ನೀಡುವ ಹಕ್ಕು ಎಎಪಿ ನಾಯಕರಿಗೆ ನೀಡಿಲ್ಲ ಎಂದಿದ್ದಾರೆ.
ದೆಹಲಿ ವಿಧಾಸಭೆ ಚುನಾವಣೆ ಯಶಸ್ಸಿನಿಂದ ಬೀಗುತ್ತಿರುವ ಆಮ್ ಆದ್ಮಿ ಪಕ್ಷ, ಕೀಳುತನ ಮತ ತಂದು ಕೊಡುತ್ತೆ ಎಂದು ಕಾಂಗ್ರೆಸ್ ಪಕ್ಷಕ್ಕೆ ತಪ್ಪು ಮಾಹಿತಿ ನೀಡುತ್ತಿದೆ ಎಂದಿದ್ದಾರೆ.
'ದೆಹಲಿ ಮುಖ್ಯಮಂತ್ರಿ ಪ್ರಧಾನಿ ಬಗ್ಗೆ ದೆಹಲಿ ವಿಧಾನಸಭೆ ಮತ್ತು ಹೊರಗೆ ನೀಡಿದ ಹೇಳಿಕೆಗಳು ಏನು? ಉನ್ನತ ಹುದ್ದೆಯಲ್ಲಿರುವ ವ್ಯಕ್ತಿ ಬಳಸುವ ಭಾಷೆ ಇದೇನಾ? ಒಂದು ವೇಳೆ ಇಂತಹ ಭಾಷೆಯನ್ನು ಭಾರತ ಸರ್ಕಾರ ಬಳಸಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿತ್ತು' ಎಂದು ಜೇಟ್ಲಿ ಹೇಳಿದ್ದಾರೆ.
'ಎಎಪಿ ನಾಯಕರು ತಮ್ಮ ಹುದ್ದೆಗೆ ತಕ್ಕಂತೆ ನಡೆದುಕೊಳ್ಳಬೇಕು. ಸಾಮಾನ್ಯ ಜನರಂತೆ ನಡೆದುಕೊಳ್ಳಬಾರದು. ಅಸಭ್ಯವಾಗಿ ವರ್ತಿಸುವ ಹಕ್ಕು ಅವರಿಗಿಲ್ಲ. ರಾಜಕೀಯದಲ್ಲಿ ಕೀಳುಮಟ್ಟದ ಭಾಷೆ ಬಳಸಬಾರದು ಎಂದಿರುವ ಜೇಟ್ಲಿ, ಅಸಭ್ಯವಾಗಿ ಸುಳ್ಳು ಹೇಳುವುದರಿಂದ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ' ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಅಸಭ್ಯತೆ ಭಾರತೀಯ ರಾಜಕೀಯದ ಹೊಸ ರೂಪವೇ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ್ದರಿಂದ ಕೆಂಡಾಮಂಡಲವಾಗಿದ್ದ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಒಬ್ಬ ಹೇಡಿ ಹಾಗೂ ಸೈಕೋಪಾತ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ವಿಧಾನಸಭೆಯಲ್ಲೂ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದ ದೆಹಲಿ ಸಿಎಂ, ಮೋದಿಗೆ ಧೈರ್ಯವಿದ್ದರೆ ಜೇಟ್ಲಿಯನ್ನು ವಜಾಗೊಳಿಸಲಿ ಎಂದು ಸವಾಲು ಹಾಕಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT