ಉತ್ತರ ಪ್ರದೇಶ ಸಚಿವ ಓಂ ಪ್ರಕಾಶ್ ನೆಹ್ರಾ (ಸಂಗ್ರಹ ಚಿತ್ರ) 
ದೇಶ

ಮುಸ್ಲಿಮರು ದೇವಾಲಯ ನಿರ್ಮಾಣಕ್ಕೆ ಸಹಾಯ ಮಾಡಬೇಕೆಂದಿದ್ದ ಉತ್ತರ ಪ್ರದೇಶ ಸಚಿವ ವಜಾ

ಮಸೀದಿಗಳ ಮೇಲಿನ ಹಕ್ಕನ್ನು ಬಿಟ್ಟುಕೊಟ್ಟು ಮುಸ್ಲಿಮರು ದೇವಾಲಯಗಳ ನಿರ್ಮಾಣಕ್ಕೆ ಸಹಕರಿಸಬೇಕು ಎಂದಿದ್ದ ಉತ್ತರ ಪ್ರದೇಶ ಸಚಿವ ಓಂ ಪ್ರಕಾಶ್ ನೆಹ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ.

ಲಖನೌ: ಅಯೋಧ್ಯೆ ಹಾಗೂ ಮಥುರಾದಲ್ಲಿರುವ ಮಸೀದಿಗಳ ಮೇಲಿನ ಹಕ್ಕನ್ನು ಬಿಟ್ಟುಕೊಟ್ಟು ಮುಸ್ಲಿಮರು ದೇವಾಲಯಗಳ ನಿರ್ಮಾಣಕ್ಕೆ ಸಹಕರಿಸಬೇಕು ಎಂದಿದ್ದ ಉತ್ತರ ಪ್ರದೇಶ ಸಚಿವ ಓಂ ಪ್ರಕಾಶ್ ನೆಹ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ.
ಮನರಂಜನಾ ತೆರಿಗೆ ಇಲಾಖೆಯ ಸಲಹೆಗಾರರೂ ಆಗಿರುವ ನೆಹ್ರಾ, ಮಂದಿರಗಳನ್ನು ನಿರ್ಮಿಸಲು ಮುಸ್ಲಿಮರು ಬೆಂಬಲಿಸಬೇಕು ಎಂದು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಂಪುಟದಿಂದ  ವಜಾಗೊಳಿಸಿದ್ದಾರೆ.  ರಾಮಮಂದಿರವನ್ನು ಅಯೋಧ್ಯೆಯಲ್ಲಿ ಅಲ್ಲದೇ ಮತ್ತೆಲ್ಲಿ ನಿರ್ಮಿಸಲು ಸಾಧ್ಯ ಎಂದಿದ್ದ ನೆಹ್ರಾ, ಮುಸ್ಲಿಮರು ಮಥುರಾ ಹಾಗೂ ಅಯೋಧ್ಯೆಯಲ್ಲಿರುವ ಮಸೀದಿಗಳ ಒಡೆತನವನ್ನು ಬಿಟ್ಟುಕೊಟ್ಟು, ಮಂದಿರಗಳ ನಿರ್ಮಾಣಕ್ಕೆ ಸಹಾಯ ಮಾಡಬೇಕು ಎಂದಿದ್ದರು.
ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವಹಿಂದು ಪರಿಷತ್ ಕಲ್ಲುಗಳನ್ನು ಸಂಗ್ರಹಿಸುತ್ತಿರುವ ಬಗ್ಗೆ ನೆಹ್ರಾ ಪ್ರತಿಕ್ರಿಯಿಸಿದ್ದರು. ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ನೆಹ್ರಾ, ಮಸೀದಿಗಳನ್ನು ನಿರ್ಮಿಸಲು ಹಿಂದುಗಳು ಸಹಾಯ ಮಾಡಬೇಕು, ಅಂತೆಯೇ ದೇವಾಲಯಗಳನ್ನು ನಿರ್ಮಿಸಲು ಮುಸ್ಲಿಂ ಬಾಂಧವರು ಸಹಾಯ ಮಾಡಬೇಕು ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT