ಅರವಿಂದ್ ಕೇಜ್ರಿವಾಲ್ 
ದೇಶ

ಡಿಡಿಸಿಎ ತನಿಖೆ ವಿರೋಧಿಸುವುದಾದರೆ ಕೇಂದ್ರ ಕೋರ್ಟ್‌ಗೆ ಹೋಗಲಿ: ಕೇಜ್ರಿವಾಲ್

ಡಿಡಿಸಿಎಂ ಹಗರಣದ ತನಿಖೆ ಸಂಬಂಧ ರಚನೆಯಾಗಿರುವ ತನಿಖಾ ಆಯೋಗದ ಬಗ್ಗೆ ಯಾವುದೇ ಸಮಸ್ಯೆ ಇದ್ದರೆ ಕೇಂದ್ರ ಸರ್ಕಾರ ಕೋರ್ಟ್ ಹೋಗಲಿ...

ನವದೆಹಲಿ: ಡಿಡಿಸಿಎಂ ಹಗರಣದ ತನಿಖೆ ಸಂಬಂಧ ರಚನೆಯಾಗಿರುವ ತನಿಖಾ ಆಯೋಗದ ಬಗ್ಗೆ ಯಾವುದೇ ಸಮಸ್ಯೆ ಇದ್ದರೆ ಕೇಂದ್ರ ಸರ್ಕಾರ ಕೋರ್ಟ್ ಹೋಗಲಿ. ಆದರೆ ಎಎಪಿ ಸರ್ಕಾರ ಮಾತ್ರ ತನ್ನ ಕ್ರಮದಿಂದ ಹಿಂದೆ ಸರಿಯುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
'ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಡಿಡಿಸಿಎ ಹಗರಣ ಸಂಬಂಧ ದೆಹಲಿ ಸರ್ಕಾರ ರಚಿಸಿರುವ ತನಿಖಾ ಆಯೋಗದ ಬಗ್ಗೆ ಗೃಹ ಸಚಿವಾಲಯಕ್ಕೆ ಯಾವುದೇ ಸಮಸ್ಯೆಗಳಿದ್ದರೆ ಹೈಕೋರ್ಟ್‌ಗೆ ಹೋಗಲಿ' ಎಂದಿದ್ದಾರೆ.
ಜನರಿಂದ ಆಯ್ಕೆಯಾದ ದೆಹಲಿ ಸರ್ಕಾರಕ್ಕೆ ತನಿಖಾ ಆಯೋಗ ರಚಿಸುವ ಅಧಿಕಾರ ಇದೆ. ಹೀಗಾಗಿ ಕೇಂದ್ರ ಸರ್ಕಾರ ತನಿಖಾ ಆಯೋಗದ ಮಾನ್ಯತೆ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ತನಿಖಾ ಆಯೋಗದ ಕಾನೂನು ಮಾನ್ಯತೆ ಪ್ರಶ್ನಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು, ಈ ಸಂಬಂಧ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT