ರಾಬರ್ಟ್ ವಾದ್ರಾ 
ದೇಶ

ಕೇಜ್ರಿವಾಲ್‌ ಸಮ-ಬೆಸ ನಿಯಮದಿಂದ ವಿವಿಐಪಿಗಳಿಗೆ ವಿನಾಯ್ತಿ, ಬರೀ 'ಬೂಟಾಟಿಕೆ': ವಾದ್ರಾ

ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಸರ್ಕಾರ ದೆಹಲಿಯಲ್ಲಿ ಜನವರಿ 1ರಿಂದ ಜಾರಿಗೆ ತರಲು ಮುಂದಾಗಿರುವ ಸಮ - ಬೆಸ ಸಂಖ್ಯೆಯ ವಾಹನ ಸಂಚಾರ...

ನವದೆಹಲಿ: ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಸರ್ಕಾರ ದೆಹಲಿಯಲ್ಲಿ ಜನವರಿ 1ರಿಂದ ಜಾರಿಗೆ ತರಲು ಮುಂದಾಗಿರುವ ಸಮ - ಬೆಸ ಸಂಖ್ಯೆಯ ವಾಹನ ಸಂಚಾರ ನಿಯಮದಲ್ಲಿ ವಿವಿಐಪಿಗಳಿಗೆ ವಿನಾಯ್ತಿ ನೀಡಿರುವುದನ್ನು ತೀವ್ರವಾಗಿ ಟೀಕಿಸಿರುವ ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾದ್ರಾ ಅವರು, ಇದೊಂದು ದೊಡ್ಡ 'ಬೂಟಾಟಿಕೆ' ಎಂದಿದ್ದಾರೆ.
ಕೇಜ್ರಿವಾಲ್ ಸರ್ಕಾರದ ಸಮ-ಬೆಸ ಸಂಖ್ಯೆ ನಿಯಮದ ಬಗ್ಗೆ ತಮ್ಮ ಫೇಸ್‌ಬುಕ್‌ ನಲ್ಲಿ ಬರೆದುಕೊಂಡಿರುವ ವಾದ್ರಾ, ಸಮ ಬೆಸ ಮಾರ್ಗ! ಸಮಾನಾಂತರ ರಿಯಾಯಿತಿ ಪಟ್ಟಿ ಸಂಪೂರ್ಣ ಬೂಟಾಟಿಕೆ. ಕಾನೂನನ್ನು ಜನರ ಹಿತಾಸಕ್ತಿಯಲ್ಲಿ ಅನುಷ್ಠಾನಿಸಬೇಕು; ನಾವೆಲ್ಲರೂ ಅದಕ್ಕೆ ಬದ್ಧರಾಗಿರಬೇಕೇ ಹೊರತು ವಿಐಪಿಗಳಾಗುವುದಲ್ಲ ಎಂದು ಟೀಕಿಸಿದ್ದಾರೆ.
15  ದಿನಗಳ ಪ್ರಾಯೋಗಿಕ ಅವಧಿಗೆಂದು ಜನವರಿ 1ರಿಂದ ಜಾರಿಗೆ ಬರುತ್ತಿರುವ ಸಮ ಬೆಸ ಸಂಖ್ಯೆ ವಾಹನ ನಿಯಮದಡಿ ದೆಹಲಿ ಸರ್ಕಾರ ವಿನಾಯಿತಿ ಪಟ್ಟಿಯನ್ನು ಸಿದ್ಧಪಡಿಸಿದ್ದು, ಆ ಪ್ರಕಾರ ಪ್ರಧಾನಿ, ಮುಖ್ಯಮಂತ್ರಿಗಳು, ರಾಷ್ಟ್ರಪತಿ, ವರಿಷ್ಠ ನ್ಯಾಯಮೂರ್ತಿಗಳು ಮುಂತಾದ ಗಣ್ಯಾತಿಗಣ್ಯರಿಗೆ ಈ ಸಾರಿಗೆ ನಿಯಮದಿಂದ ವಿನಾಯ್ತಿ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT