ನರೇಂದ್ರ ಮೋದಿ 
ದೇಶ

ರಾಷ್ಟ್ರೀಯ ಯುವದಿನೋತ್ಸವ ಆಚರಣೆಗೆ ಸಲಹೆ ನೀಡಲು ಯುವಜನತೆಗೆ ಪ್ರಧಾನಿ ಮೋದಿ ಆಹ್ವಾನ

ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಜ.12 ರಂದು ಆಚರಿಸಲಾಗುವ ರಾಷ್ಟ್ರೀಯ ಯುವದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಯುವಕರಿಂದಲೇ ಸಲಹೆ ಕೇಳಿದ್ದಾರೆ.

ನವದೆಹಲಿ: ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಜ.12 ರಂದು ಆಚರಿಸಲಾಗುವ ರಾಷ್ಟ್ರೀಯ ಯುವದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಯುವಕರಿಂದಲೇ ಸಲಹೆ ಕೇಳಿದ್ದಾರೆ. 
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ "ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜ.12 ನ್ನು ಯುವದಿನವನ್ನಾಗಿ ಆಚರಿಸುತ್ತೇವೆ, 1995 ರಿಂದ ರಾಷ್ಟ್ರೀಯ ಯುವದಿನೋತ್ಸವವನ್ನು ಆಚರಿಸಲಾಗುತ್ತಿದ್ದು ಈ ಬಾರಿಯ ಯುವದಿನೋತ್ಸವ ರಾಯ್ ಪುರ, ಚತ್ತೀಸ್ ಗಢದಲ್ಲಿ ನಡೆಯಲಿದ್ದು ಆಚರಣೆ ನಡೆಸುವುದರ ಬಗ್ಗೆ ಯುವಜನರು ಮುಕ್ತವಾಗಿ ಸಲಹೆ ನೀಡಬಹುದು ಎಂದು ಪ್ರಧಾನಿ ಕರೆ ನೀಡಿದ್ದಾರೆ.
ಭಾರತದ ಯುಜನತೆ ಹಾಗೂ ಅಭಿವೃದ್ಧಿ, ಕೌಶಲ್ಯ ಮತ್ತು ಸಾಮರಸ್ಯ ಈ ಬಾರಿಯ ಯುವದಿನೋತ್ಸವದ ವಿಷಯವಾಗಿರಲಿದ್ದು ಇದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಸಲಹೆ ಕೊಡುವಿರಾ ಎಂದು ಪ್ರಧಾನಿ ನರೇಂದ್ರ ಮೋದಿ ಯುವಕತೆಗೆ ಕರೆ ನೀಡಿದ್ದಾರೆ. ನರೇಂದ್ರ ಮೋದಿ ಮೊಬೈಲ್ ಆಪ್ ಮೂಲಕ ಯುವಜನತೆ ತಮ್ಮ ಸಲಹೆಗಳನ್ನು ನೀಡಬಹುದು ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT