ಅಜಿತ್ ದೋವಲ್ 
ದೇಶ

ಬ್ರಿಟಿಷರು ಭಾರತ ಬಿಟ್ಟು ತೊಲಗಲು ಸುಭಾಶ್ ಚಂದ್ರ ಬೋಸ್‌ರ ಐಎನ್‌ಎ ಕಾರಣ

ಸುಭಾಶ್ ಚಂದ್ರ ಬೋಸ್ ಅವರು ಇಂಡಿಯನ್ ನ್ಯಾಷನಲ್ ಆರ್ಮಿ ಮೂಲಕ ಸೃಷ್ಟಿಸಿದ ಕಿಡಿಯೇ ಬ್ರಿಟಿಷರು ಭಾರತ ಬಿಟ್ಟು ತೊಲಗಲು ಕಾರಣವಾಯಿತು...

ನವದೆಹಲಿ: 1947ರಲ್ಲಿ ಬ್ರಿಟೀಷರು ಭಾರತವನ್ನು ಬಿಟ್ಟು ತೊಲಗಲು ಕಾರಣ ಏನು ಎಂದರೆ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಎಂಬ ಉತ್ತರ ಸಿಗುತ್ತದೆ. ಆದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ ಪ್ರಶ್ನೆಗೆ ಕೊಟ್ಟ ಉತ್ತರವೇನು ಗೊತ್ತಾ? ಸುಭಾಶ್ ಚಂದ್ರ ಬೋಸ್! 
ನೇತಾಜಿ ಸುಭಾಶ್ ಚಂದ್ರ ಬೋಸ್ ಅವರು ಇಂಡಿಯನ್ ನ್ಯಾಷನಲ್ ಆರ್ಮಿ ಮೂಲಕ ಸೃಷ್ಟಿಸಿದ ಕಿಡಿಯೇ ಬ್ರಿಟಿಷರು ಭಾರತ ಬಿಟ್ಟು ತೊಲಗಲು ಕಾರಣವಾಯಿತು ಎಂದು ದೋವಲ್ ಹೇಳಿದ್ದಾರೆ. 
ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಲ್ಪಟ್ಟ ವಿಡಿಯೋ ಒಂದರಲ್ಲಿ ದೋವಲ್,  1945ರಲ್ಲಿ ಎರಡನೇ ಮಹಾಯುದ್ಧವನ್ನು ಗೆದ್ದ ಬ್ರಿಟಿಷರು ಅಷ್ಟು ಬೇಗನೆ ಭಾರತ ಬಿಟ್ಟು ಹೋಗಲು ತೀರ್ಮಾನಿಸಿದ್ದು ಯಾಕೆ? ಎಂಬುದನ್ನು ವಿವರಿಸಿದ್ದಾರೆ. ಬೋಸ್ ತಮ್ಮ ಇಂಡಿಯನ್ ನ್ಯಾಷನಲ್ ಆರ್ಮಿಯ ಸೈನಿಕರ ಮನಸ್ಸಲ್ಲಿ ಹಚ್ಚಿದ್ದ ಸ್ವಾತಂತ್ರ್ಯದ ಕಿಚ್ಚು ಅಂಥದ್ದಾಗಿತ್ತು ಎಂದು ದೋವಲ್ ಇಲ್ಲಿ ಹೇಳಿದ್ದಾರೆ.
ಆಗಸ್ಟ್ 18, 1945ರಲ್ಲಿ ಜಪಾನ್‌ಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ಸುಭಾಷ್ ಚಂದ್ರ ಬೋಸ್ ಫೋರ್‌ಮೋಸಾ (ಈಗಿನ ತೈವಾನ್)ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು  1945 ಆಗಸ್ಟ್ 22 ರಂದು ಟೋಕಿಯೋ ರೇಡಿಯೋ ಸುದ್ದಿ ಪ್ರಸಾರ ಮಾಡಿತ್ತು.
ಆದರೆ ವಿಮಾನ ಅಪಘಾತದಲ್ಲಿ ಬೋಸ್ ಸತ್ತಿಲ್ಲ ಎಂದು ಅವರ ಅನುಯಾಯಿಗಳು ಹೇಳಿದ್ದು, ಬೋಸ್ 1945ರ ನಂತರ ಬದುಕಿದ್ದರು ಎಂಬ ಬಗ್ಗೆ ಹಲವಾರು ಕತೆಗಳು ಹುಟ್ಟಿಕೊಂಡಿದ್ದವು . 
ಏತನ್ಮಧ್ಯೆ, ಬೋಸ್ ಕುಟುಂಬದವರ ಬಹುಕಾಲದ ಬೇಡಿಕೆಗೆ ಮಣಿದು, ಪ್ರಧಾನಿ ನರೇಂದ್ರ ಮೋದಿಯರ ಸರ್ಕಾರ ನೇತಾಜಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಬಹಿರಂಗ ಪಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT