ದ್ವಿಚಕ್ರ ಸವಾರ, ಮಹಿಳೆಯರಿಗೆ ವಿನಾಯಿತಿ ಏಕೆ?: ಕೇಜ್ರಿವಾಲ್ ಗೆ ಹೈಕೋರ್ಟ್ ಪ್ರಶ್ನೆ 
ದೇಶ

ದ್ವಿಚಕ್ರ ಸವಾರ, ಮಹಿಳೆಯರಿಗೆ ವಿನಾಯಿತಿ ಏಕೆ?: ಕೇಜ್ರಿವಾಲ್ ಗೆ ಹೈಕೋರ್ಟ್ ಪ್ರಶ್ನೆ

ವಾಯು ಮಾಲಿನ್ಯ ನಿಯಂತ್ರಿಸಲು ದೆಹಲಿ ಆಮ್‌ ಆದ್ಮಿ ಸರ್ಕಾರ ಕೈಗೊಂಡಿರುವ 'ಸಮ' ಮತ್ತು 'ಬೆಸ' ಸಂಖ್ಯೆಯ ವಾಹನ ಸಂಚಾರ ನಿಯಮದಲ್ಲಿ ದ್ವಿಚಕ್ರ ಹಾಗೂ ಮಹಿಳೆಯರಿಗೆ ನೀಡಿರುವ ವಿನಾಯಿತಿ ಕುರಿತಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ...

ನವದೆಹಲಿ: ವಾಯು ಮಾಲಿನ್ಯ ನಿಯಂತ್ರಿಸಲು ದೆಹಲಿ ಆಮ್‌ ಆದ್ಮಿ ಸರ್ಕಾರ ಕೈಗೊಂಡಿರುವ 'ಸಮ' ಮತ್ತು 'ಬೆಸ' ಸಂಖ್ಯೆಯ ವಾಹನ ಸಂಚಾರ ನಿಯಮದಲ್ಲಿ ದ್ವಿಚಕ್ರ ಹಾಗೂ ಮಹಿಳೆಯರಿಗೆ ನೀಡಿರುವ ವಿನಾಯಿತಿ ಕುರಿತಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ದೆಹಲಿ ಹೈ ಕೋರ್ಟ್ ಬುಧವಾರ ಪ್ರಶ್ನೆ ಮಾಡಿದೆ.

ವಾಯುಮಾಲಿನ್ಯ ತಡೆಗಟ್ಟಲು ದೆಹಲಿ ಸರ್ಕಾರ ಜಾರಿಗೆ ತಂದ ಸಮ, ಬೆಸ ನಿಯಮ ಕುರಿತಂತೆ ಹಲವು ಟೀಕೆಗಳು ವ್ಯಕ್ತವಾಗಿದ್ದವು. ಇದೀಗ ಈ ನಿಯಮ ಕುರಿತಂತೆ ಇಂದು ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯವು ನಿಯಮದಲ್ಲಿ ಮಹಿಳೆ ಹಾಗೂ ದ್ವಿಚಕ್ರ ಸವಾರರಿಗೆ ಯಾವ ಕಾರಣಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಅರವಿಂದ ಕೇಜ್ರಿವಾಲ್ ಅವರನ್ನು ಪ್ರಶ್ನಿಸಿದೆ.

ವಾಯುಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಸರ್ಕಾರವು ವಾಯುಮಾಲಿನ್ಯ ನಿಯಂತ್ರಣ ಮಾಡಲು ಸಮ ಮತ್ತು ಬೆಸ ಸಂಖ್ಯೆಗಳ ಕಾರುಗಳ ಸಂಚಾರ ನಿಯಮವನ್ನು ಘೋಷಿಸಿತ್ತು. ಈ ನಿಯಮಗಳು ಜನವರಿ 1 ರಿಂದ ಜಾರಿಯಾಗಲಿದೆ. ಇದರಂತೆ ನಿಯಮದ ಬ್ಲ್ಯೂಪ್ರಿಂಟ್ ವೊಂದನ್ನು ಕೇಜ್ರಿವಾಲ್ ಅವರು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದರು. ನಿಯಮದಲ್ಲಿ ಮಹಿಳೆ, ದ್ವಿಚಕ್ರವಾಹನ, ಅಗ್ನಿ ಶಾಮಕದಳ, ಪೊಲೀಸ್, ಆ್ಯಂಬುಲೆನ್ಸ್, ಲೋಕಸಭೆ ಸ್ಪೀಕರ್, ರಾಷ್ಟ್ರಪತಿ, ಉಪರಾಷ್ಟ್ರಪತಿ, ಸುಪ್ರೀಂ-ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ವಿನಾಯಿತಿ ನೀಡಲಾಗಿತ್ತು.

ಈ ನಿಯಮವನ್ನು ಜನವರಿ 1 ರಿಂದ 15ರವರೆಗಿ ಜಾರಿಗೊಳಿಸಲಾಗುತ್ತಿದ್ದು, ತದನಂತರ ನಿಯಮಗಳ ಬಗ್ಗೆ ಮೌಲ್ಯಮಾಪನ ಮಾಡಿ ಧೀರ್ಘಕಾಲಿಕ ಜಾರಿ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಕೇಜ್ರಿವಾಲ್ ಅವರು ಹೇಳಿದ್ದಾರೆ.

ಈ ನಿಯಮ ಕುರಿತಂತೆ ದೆಹಲಿಯಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಪ್ರಸ್ತುತ ಸಂಚಾರಿ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದ್ದು, ಮಾಲಿನ್ಯ ತಡೆಗಟ್ಟಲು ಸರ್ಕಾರ ಕೆಟ್ಟ ನಿರ್ಧಾರಗಳನ್ನು ಕೈಗೊಳಅಳುತ್ತಿದೆ. ಮಾಲಿನ್ಯವೇ ಇಲ್ಲದಂತೆ ಮಾಡಲು ಯಾವುದೇ ಪರಿಹಾರವಿಲ್ಲ ಎಂಬ ಹಲವು ಟೀಕೆಗಳು ವ್ಯಕ್ತವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT