ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಸರ್ಕಾರದ ಅಧಿಕಾರಿಗಳ ಅಮಾನತು ಆದೇಶ ರದ್ದುಗೊಳಿಸಿದ ಕೇಂದ್ರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರಿದಿದ್ದು, ಇಬ್ಬರು ಅಧಿಕಾರಿಗಳನ್ನು...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರಿದಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ್ದ ದೆಹಲಿ ಸರ್ಕಾರದ ಆದೇಶವನ್ನು ಗುರುವಾರ ಕೇಂದ್ರ ಸರ್ಕಾರ ರದ್ದುಪಡಿಸಿದೆ.
ಪಬ್ಲಿಕ್ ಪ್ರಾಸಿಕ್ಯೂಟರ್ ಗಳ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ನಿರ್ಣಯಕ್ಕೆ ಸಹಿ ಹಾಕಿಲ್ಲ ಎಂಬ ಕಾರಣಕ್ಕೆ ದೆಹಲಿ ಸರ್ಕಾರ ಇಬ್ಬರು ಗೃಹ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಆದರೆ ಈ ಅಮಾನತು ಆದೇಶವನ್ನು ಕೇಂದ್ರ ಗೃಹ ಸಚಿವಾಲಯ ಇಂದು ರದ್ದುಗೊಳಿಸಿದೆ. 
ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿರುವ ದೆಹಲಿ ಸರ್ಕಾರ ಕ್ರಮ ಸರಿಯಲ್ಲ. ಇದು ಕಾನೂನು ಬಾಹಿರ ನಡೆ ಎಂದು ಕೇಂದ್ರ ಗೃಹಸಚಿವಾಲಯ ದೆಹಲಿ ಸರ್ಕಾರಕ್ಕೆ ಪತ್ರ ಬರೆದಿದೆ. ಅಲ್ಲದೇ ಇಬ್ಬರು ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿದೆ. ಈ ಮೂಲಕ ಮತ್ತೆ ಕೇಜ್ರಿವಾಲ್ ಮತ್ತು ಕೇಂದ್ರ ಸರ್ಕಾರದ ನಡುವೆ ಜಂಗಿಕುಸ್ತಿ ಮುಂದುವರಿದಂತಾಗಿದೆ.
ಈ ಮಧ್ಯೆ ದೆಹಲಿ ಸರ್ಕಾರದ ಕ್ರಮವನ್ನು ಖಂಡಿಸಿ 70 ಐಎಎಸ್ ಅಧಿಕಾರಿಗಳು ಅರ್ಧ ದಿನ ರಜೆ ಹಾಕಿ, ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT