ಟ್ರಾಫಿಕ್ 
ದೇಶ

ದೆಹಲಿ ಟ್ರಾಫಿಕ್: ಮಹಿಳೆಯರಿಗೆ ಏಕೆ ವಿನಾಯಿತಿ?

ದೆಹಲಿ ಎಎಪಿ ಸರ್ಕಾರ ಸಮ-ಬೆಸ ಸಂಖ್ಯೆಯ ವಾಹನ ಸಂಚಾರ ನಿಯಮವನ್ನು ಜ.1ರ ಶುಕ್ರವಾರದಿಂದ ಜಾರಿಗೆ ತರಲಿದೆ...

ನವದೆಹಲಿ: ದೆಹಲಿ ಎಎಪಿ ಸರ್ಕಾರ ಸಮ-ಬೆಸ ಸಂಖ್ಯೆಯ ವಾಹನ ಸಂಚಾರ ನಿಯಮವನ್ನು ಜ.1ರ ಶುಕ್ರವಾರದಿಂದ ಜಾರಿಗೆ ತರಲಿದೆ.

ಈ ನಡುವೆ ಹದಿನೈದು ದಿನಗಳ ಕಾಲ ಚಾಲ್ತಿಯಲ್ಲಿರುವ ಈ ಸಮಯದಲ್ಲಿ ದ್ವಿಚಕ್ರ ವಾಹನ ಸವಾರರು ಮತ್ತು ಮತ್ತು ಮಹಿಳೆಯರಿಗೆ ಏಕೆ ವಿನಾಯಿತಿ ನೀಡಲಾಗಿದೆ ಎಂದು ಹೈಕೋರ್ಟ್ ದೆಹಲಿಯ ಕೇಜ್ರಿವಾಲ್ ಸರ್ಕಾರವನ್ನು ಪ್ರಶ್ನಿಸಿದೆ. ಜತೆಗೆ ಈ ಕುರಿತು ಸ್ಪಷ್ಟೀಕರಣ ನೀಡುವಂತೆ ದೆಹಲಿ ಸರ್ಕಾರಕ್ಕೆ ತಿಳಿಸಿರುವ ನ್ಯಾ. ಹಿಮಾ ಕೊಹ್ಲಿ ಮತ್ತು ಸುನಿಲ್ ಗೌರ್ ಅವರನ್ನೊಳಗೊಂಡ ನ್ಯಾಯಪೀಠ, ಜನವರಿ 6ಕ್ಕೆ ವಿಚಾರಣೆ ಮುಂದೂಡಿದೆ.

ನಿಯಮದಿಂದ ವಕೀಲರಿಗೂ ವಿನಾಯಿತಿ ನೀಡಬೇಕು ಎಂದು ದೆಹಲಿಯ ವಕೀಲ ರಾಹುಲ್ ಅಗರ್‍ವಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ದೆಹಲಿ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ. ಅಲ್ಲದೆ, ನಿಯಮದಿಂದ ತಮಗೆ ವಿನಾಯಿತಿ ನೀಡಬೇಕು ಎಂಬ ವಕೀಲರ ವಾದವನ್ನು ಕೋರ್ಟ್ ತಳ್ಳಿ ಹಾಕಿದೆ.  ಈ ನಡುವೆ ಬುಧವಾರ ದೆಹಲಿ ಶಾಲೆಯೊಂದಕ್ಕೆ ಭೇಟಿ ನೀಡಿದ ಸಿಎಂ, ಸರಿ ಬೆಸ ನಿಯಮಕ್ಕೆ ಪೋಷಕರ ಮನವೊಲಿಸುವಂತೆ ಮಕ್ಕಳಿಗೆ ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT