ಅಣ್ಣಾ ಹಜಾರೆ 
ದೇಶ

ಚುನಾವಣೆ ವೇಳೆ ನೀಡಿ ಮರೆತ ಭರವಸೆಗಳನ್ನು ಮೋದಿಗೆ ನೆನಪಿಸಿದ ಅಣ್ಣಾ ಹಜಾರೆ

ಲೋಕಸಭೆ ಚುನಾವಣೆ ವೇಳೆ ನೀಡಿ ಮರೆತ ಭರವಸೆಗಳನ್ನು ಪೂರೈಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿರಿಯ ಸಾಮಾಜಿಕ...

ರಾಳೇಗಣ ಸಿದ್ಧಿ(ಮಹಾರಾಷ್ಟ್ರ): ಲೋಕಸಭೆ ಚುನಾವಣೆ ವೇಳೆ ನೀಡಿ ಮರೆತ ಭರವಸೆಗಳನ್ನು ಪೂರೈಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಪತ್ರ ಬರೆದಿದ್ದಾರೆ.

ಯುಪಿಎ ಸರ್ಕಾರ ಮತ್ತು ಎನ್​ಡಿಎ ಸರ್ಕಾರಗಳ ಮಧ್ಯೆ ಯಾವುದೇ ವ್ಯತ್ಯಾಸವೂ ಇಲ್ಲ ಎಂದು ಟೀಕಿಸಿರುವ ಅಣ್ಣಾ ಹಜಾರೆಯವರು ತಮ್ಮ ಮರೆತ ಚುನಾವಣಾ ಭರವಸೆಗಳನ್ನು ಪತ್ರ ಬರೆಯುವ ಮೂಲಕ ಮೋದಿ ಅವರಿಗೆ ನೆನಪಿಸಿದ್ದಾರೆ.

ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ‘ಲೋಕಪಾಲ’ ಮತ್ತು ‘ಲೋಕಾಯುಕ್ತ’ ಜಾರಿ ಹಾಗೂ ರಾಷ್ಟ್ರದಲ್ಲಿ ರೈತರ ಆತ್ಮಹತ್ಯೆಗಳನ್ನು ನಿಲ್ಲಿಸಲು ಕೃಷಿ ಉತ್ಪನ್ನಗಳಿಗೆ ನ್ಯಾಯೋಚಿತ ಬೆಲೆ ಒದಗಿಸಿಕೊಡುವುದು ಅನಿವಾರ್ಯ ಎಂದು ಪ್ರಧಾನಿಗೆ ಬರೆದಿರುವ ಮೂರು ಪುಟಗಳ ಪತ್ರವೊಂದಲ್ಲಿ ನಮೂದಿಸಿದ್ದಾರೆ.

2014ರ ಲೋಕಸಭಾ ಚುನಾವಣೆಗೆ ಮೊದಲು ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದರೆ ರಾಷ್ಟ್ರವನ್ನು ಭ್ರಷ್ಟಾಚಾರ ಮುಕ್ತಗೊಳಿಸಲಾಗುವುದು ಎಂಬುದಾಗಿ ಮೋದಿ ಅವರು ಪ್ರಚಾರ ಮಾಡಿದ್ದ ಬಗ್ಗೆ 79ರ ಹರೆಯದ ವಯೋವೃದ್ಧ ಹಜಾರೆ ತಮ್ಮ ಪತ್ರದಲ್ಲಿ ಬೊಟ್ಟು ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT