ಸಿದ್ಧಿ ವಿನಾಯಕ ದೇವಾಲಯ (ಕೃಪೆ: ದೇವಾಲಯದ ಅಧಿಕೃತ ವೆಬ್ ಸೈಟ್ ) 
ದೇಶ

ಮಹಾರಾಷ್ಟ್ರದಲ್ಲಿ ಆತ್ಮಹತ್ಯೆಗೈದ ಕೃಷಿಕರ ಮಕ್ಕಳಿಗೆ ಸಿದ್ಧಿವಿನಾಯಕ ದೇಗುಲದಿಂದ ಸ್ಕಾಲರ್‌ಶಿಪ್

ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೃಷಿಕರ ಮಕ್ಕಳಿಗೆ ಸಹಾಯ ಮಾಡಲು ಮುಂಬೈನ ಸಿದ್ಧಿ ವಿನಾಯಕ ದೇವಾಲಯ ಟ್ರಸ್ಟ್ ಮುಂದಾಗಿದೆ. ಸಿದ್ಧಿವಿನಾಯಕ್ ...

ಮುಂಬೈ: ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೃಷಿಕರ ಮಕ್ಕಳಿಗೆ ಸಹಾಯ ಮಾಡಲು ಮುಂಬೈನ ಸಿದ್ಧಿ ವಿನಾಯಕ ದೇವಾಲಯ ಟ್ರಸ್ಟ್ ಮುಂದಾಗಿದೆ. ಸಿದ್ಧಿವಿನಾಯಕ್ ಸ್ಕಾಲರ್‌ಶಿಪ್ ಯೋಜನೆಯನ್ನು ಆರಂಭಿಸಿರುವ ಟ್ರಸ್ಟ್ ಆತ್ಮಹತ್ಯೆಗೈದ ಕೃಷಿಕರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ರು. 1 ಕೋಟಿ ಆರ್ಥಿಕ ಸಹಾಯ ನೀಡುವುದಾಗಿ ಹೇಳಿದೆ.
ರೈತರ ಮಕ್ಕಳಿಗೆ ಪದವಿ ಪಡೆಯುವವರೆಗೆ ಆರ್ಥಿಕ ಸಹಾಯ ನೀಡಲಾಗುವುದು.
ಈ ಯೋಜನೆಗೆ ಈಗಾಗಲೇ ರಾಜ್ಯ ಸರ್ಕಾರದ ನಿಯಮ ಮತ್ತು ಕಾನೂನು ಇಲಾಖೆ ಸಮ್ಮತಿ  ನೀಡಿದೆ. ಈ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು ರೈತರ ಮಕ್ಕಳ ಹೆಸರನ್ನು ಸಂಗ್ರಹಿಸಿ ದೇವಾಲಯದ ಟ್ರಸ್ಟ್‌ಗೆ ಕಳುಹಿಸಲು ಕೋರಲಾಗಿದೆ.
ಮುಂಬೈನ ಸಿದ್ಧಿ ವಿನಾಯಕ ದೇಗುಲದ ವಾರ್ಷಿಕ ಆದಾಯ ರು. 65 ಕೋಟಿಯಷ್ಟಿದೆ. 
1997ರಿಂದ ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ 70,000 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT