ನರೇಂದ್ರ ಮೋದಿ 
ದೇಶ

ದೇಶ ಅಚಾತುರ್ಯವನ್ನು ಕ್ಷಮಿಸುತ್ತದೆ, ನಂಬಿಕೆದ್ರೋಹವನಲ್ಲ: ಮೋದಿ

ಆಮ್ ಆದ್ಮಿ ಪಕ್ಷ ನಕಲಿ ಕಂಪನಿಗಳ ಮೂಲಕ ದೇಣಿಗೆ ಪಡೆದಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದರು.

ನವದೆಹಲಿ: ಆಮ್ ಆದ್ಮಿ ಪಕ್ಷ ನಕಲಿ ಕಂಪನಿಗಳ ಮೂಲಕ ದೇಣಿಗೆ ಪಡೆದಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದರು.

ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ದೆಹಲಿಯ ರೋಹಿನಿಯಲ್ಲಿ ಪಕ್ಷದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನತೆ ಒಂದು ವೇಳೆ ಆಚಾತುರ್ಯವನ್ನು ಕ್ಷಮಿಸುತ್ತಾರೆ ಹೊರತು ನಂಬಿಕೆದ್ರೋಹವನ್ನಲ್ಲ ಎಂದು ಆಪ್ ವಿರುದ್ಧ ವಾಗ್ದಾಳಿ ನಡೆಸಿದರು.

ದೇಣಿಗೆ ಹಣ ಪಡೆದಿರುವ ಆಪ್ ಪಕ್ಷ ಇದೀಗ ಮತ್ತೊಂದು ವರಸೆ ತೋರಿಸುತ್ತಿದೆ. ಕಾಂಗ್ರೆಸ್, ಭಾರತೀಯ ಜನತಾ ಪಾರ್ಟಿ ಅಥವಾ ಆಪ್ ಯಾರು ಅತಿ ಹೆಚ್ಚು ಭ್ರಷ್ಟ ಯಾರು ಎಂಬುದು ತನಿಖೆಯಾಗಲಿ ಎಂದು ಹೇಳುತ್ತಿದೆ ಎಂದು ಮೋದಿ ಹೇಳಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ 27 ಸ್ಥಾನಗಳಲ್ಲಿ ಗೆದ್ದಿದ್ದ ಆಪ್ ಪಕ್ಷ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬೆಂಬಲ ಪಡೆಯುವುದಿಲ್ಲ ಎಂದು ಹೇಳಿತ್ತು. ಆದರೆ ಮಾತು ಮರೆತ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಪಕ್ಷದ ಬೇಷರತ್ತು ಬೆಂಬಲ ಪಡೆದಿದ್ದರು. ಅದನ್ನು ಪ್ರಶ್ನಿಸಿದರೆ ತಾವಾಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲ ನೀಡುವಂತೆ ಕೋರಿಲ್ಲ. ಅವರಾಗೆ ನೀಡಿದ್ದರು ಎಂದು ತಮ್ಮ ನಂಬಿಕೆದ್ರೋಹವನ್ನು ಸಮರ್ಥಿಸಿಕೊಂಡಿದ್ದರು.

ಅದರಂತೆ ಮತ್ತೊಮ್ಮೆ ಆಪ್ ಪಕ್ಷ ತಾವಾಗೆ ಯಾರನ್ನು ದೇಣಿಗೆ ನೀಡುವಂತೆ ಕೇಳಿಲ್ಲ. ಅವರಾಗೆ ನೀಡಿದರು ಎಂಬ ಸಿದ್ದ ಉತ್ತರವನ್ನು ನೀಡುತ್ತಾ ವಿಶ್ವಾಸದ್ರೋಹ ಎಸಗಿದ್ದಾರೆ ಎಂದು ಮೋದಿ ಕಿಡಿಕಾರಿದರು.

ಕಳೆದ ಆಗಸ್ಟ್‌ನಲ್ಲಿ ಆಪ್ ಪಕ್ಷದಿಂದ ಹೊರಬಂದು ಆವಂ ಪಕ್ಷ ಸ್ಥಾಪಿಸಿಕೊಂಡಿರುವ ಕೆಲವರು ಆಮ್ ಆದ್ಮಿ ಪಕ್ಷಕ್ಕೆ 51 ಬೋಗಸ್ ಕಂಪನಿಗಳಿಂದ ಹಣ ಬಂದಿದೆ. ಈ ಪೈಕಿ ನಾಲ್ಕು ಕಂಪನಿಗಳು ತಲಾ 50 ಲಕ್ಷ ರು. ಹಣ ನೀಡಿವೆ. ಇದರಲ್ಲಿ ಗಮನಿಸಬೇಕಾದ ಪ್ರಮುಖ ವಿಷಯವೆನೆಂದರೆ ಒಂದು ಕಂಪನಿಯ ವಿಳಾಸದಲ್ಲಂತೂ ಗುಡಿಸಲು ಪತ್ತೆಯಾಗಿದೆ ಎಂದು ಆರೋಪ ಮಾಡಿದ್ದರು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT