ಶಾರುಖ್‌ ಖಾನ್‌ 
ದೇಶ

ರ್ಯಾಂಪ್ ತೆರವುಗೊಳಿಸುವಂತೆ ನಟ ಶಾರುಖ್‌ ಗೆ ಬಿಎಂಸಿ ನೋಟಿಸ್

ಮುಂಬೈ: ವಾಹನಗಳ ಪಾರ್ಕಿಂಗ್‌ಗಾಗಿ ಬಾಂದ್ರಾದ ತಮ್ಮ ನಿವಾಸದ ಸಮೀಪ ರಸ್ತೆ ಒತ್ತುವರಿ ಮಾಡಿ ರ್ಯಾಂಪ್ ನಿರ್ಮಿಸಿಕೊಂಡಿದ್ದ ಬಾಲಿವುಡ್ ಬಾದ್ ಶಾ ನಟ ಶಾರುಖ್‌ ಖಾನ್‌ರಿಗೆ ರ್ಯಾಂಪ್ ತೆರವುಗೊಳಿಸುವಂತೆ ಬಿಎಂಸಿ ನೋಟಿಸ್ ಜಾರಿ ಮಾಡಿದೆ.

ಶಾರುಖ್‌ ವಾಹನಗಳ ಪಾರ್ಕಿಂಗ್‌ಗಾಗಿ ಅನಧಿಕೃತ ರ್‍ಯಾಂಪ್‌ ನಿರ್ಮಿಸಿರುವ ಕಾರಣ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದ್ದು, ಅದನ್ನು ಒಡೆದುಹಾಕಬೇಕು ಎಂದು ಬಿಜೆಪಿ ಸಂಸದೆ ಪೂನಂ ಮಹಾಜನ್‌ ಅವರು ಮುಂಬೈ ಮಹಾನಗರಪಾಲಿಕೆಗೆ ಪತ್ರ ಮುಖೇನ ಆಗ್ರಹಿಸಿದ್ದರು.

ಇದೀಗ ಶಾರುಖ್ ರಿಗೆ ನೋಟಿಸ್ ಜಾರಿ ಮಾಡಿರುವ ಬ್ರಿಹಾನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಏಳು ದಿನಗಳೊಳಗಾಗಿ ರ್ಯಾಂಪ್ ತೆರವುಗೊಳಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT