ಶ್ರಿಂಜಾಯ್ ಬೋಸ್ 
ದೇಶ

ಟಿಎಂಸಿ ಸಂಸದ ಶ್ರಿಂಜಾಯ್ ಬೋಸ್ ರಾಜಿನಾಮೆ

ನವದೆಹಲಿ: ಬಹುಕೋಟಿ ಶಾರದ ಗ್ರೂಪ್ ಚಿಟ್ ಫಂಡ್ ಹಗರಣ ಸಂಬಂಧ ಬಂಧನಕ್ಕೀಡಾಗಿ ಶರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ತೃಣಮೂಲ ಕಾಂಗ್ರೆಸ್ ಸಂಸದ ಶ್ರಿಂಜಾಯ್ ಬೋಸ್ ತಮ್ಮ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಸದ್ಯ ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನೀಡಿರುವ ಅವರು, ಟಿಎಂಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ.

ಪ್ರಕರಣ ಸಂಬಂಧ ಕಳೆದ ನವೆಂಬರ್ 21ರಂದು ಸಿಬಿಐ ಅಧಿಕಾರಿಗಳು ಶ್ರಿಂಜಾಯ್ ಬೋಸ್ ರನ್ನು ಬಂಧಿಸಿದ್ದರು. ಪ್ರಕರಣ ಸಂಬಂಧ ಜಾಮೀನು ಕೋರಿ ಅಲಿಪೋರ್ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಶ್ರಿಂಜಾಯ್ ಬೋಸ್ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಮೂರು ಷರತ್ತುಗಳು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.

ಕೋರ್ಟ್ ಷರತ್ತಿನಂತೆ ಶ್ರಿಂಜಾಯ್ ಬೋಸ್ ದೇಶ ಬಿಟ್ಟು ಹೋಗುವಂತಿಲ್ಲ. ಸಾಕ್ಷಿಗಳನ್ನು ಬೆದರಿಸುವಂತಿಲ್ಲ ಹಾಗೂ ಸಿಬಿಐ ವಿಚಾರಣೆಗೆ ಹಾಜರಾಗಬೇಕಿದೆ.

ಬಹುಕೋಟಿ ಶಾರದಾ ಚಿಟ್ ಫಂಡ್ ಪ್ರಕರಣ ಭಾಗಿಯಾಗಿರುವ ಸಂಶಯದ ಮೇಲೆ ಸಿಬಿಐ ಅಧಿಕಾರಿಗಳು ಶ್ರಿಂಜಾಯ್ ಬೋಸ್ ರನ್ನು ಬಂಧಿಸಿ ವಿಚಾರಣಗೊಳಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT