ನರೇಂದ್ರ ಮೋದಿ 
ದೇಶ

ನೀತಿ ಆಯೋಗದ ಮೊದಲ ಸಭೆ

ಯೋ ಜನಾ ಆಯೋಗದ ಜಾಗದಲ್ಲಿ ಹೊಸದಾಗಿ ರಚನೆಯಾಗಿರುವ ನೀತಿ ಆಯೋಗದ ಮೊದಲ ಸಭೆ ಶುಕ್ರವಾರ ನವದೆಹಲಿಯಲ್ಲಿ...

ನವದೆಹಲಿ: ಯೋಜನಾ ಆಯೋಗದ ಜಾಗದಲ್ಲಿ ಹೊಸದಾಗಿ ರಚನೆಯಾಗಿರುವ ನೀತಿ ಆಯೋಗದ ಮೊದಲ ಸಭೆ ಶುಕ್ರವಾರ ನವದೆಹಲಿಯಲ್ಲಿ  ನಡೆಯಿತು. ಖ್ಯಾತ ಆರ್ಥಿಕ ತಜ್ಞರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ತೈಲ ದರ ಇಳಿಕೆ ಮತ್ತು ಸದ್ಯದ ವಿಶ್ವ ಆರ್ಥಿಕ ಪರಿಸ್ಥಿ ತಿಯ ಸೂಕ್ತ ಲಾಭ ಪಡೆಯುವ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರು. ಜತೆಗೆ, ಹೂಡಿಕೆ ದಾರರನ್ನು ವಾಪಸ್ ಕರೆತರುವ ಮತ್ತು ಬೆಳವಣಿ ಗೆ ಆಧರಿತ ಬಜೆಟ್ ಅನ್ನು ರೂಪಿಸಲು ನೆರವು ನೀಡುವಂತೆಯೂ ಆರ್ಥಿಕ ತಜ್ಞರಿಗೆ ಪ್ರಧಾನಿ ಮನವಿ ಮಾಡಿದರು. ಜನರ ನಿರೀಕ್ಷೆ ಗಳನ್ನು ಈಡೇರಿಸಲು ಸದ್ಯದ ವಿಶ್ವ ಆರ್ಥಿಕ ಪರಿಸ್ಥಿತಿಯ ಲಾಭ ಪಡೆದು ದೇಶ ಶೀಘ್ರಗತಿಯಲ್ಲಿ ಬೆಳವಣಿಗೆ ಸಾಧಿಸ ಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳ ಬೇಕು ಎಂದು ಮೋದಿ ಹೇಳಿದ್ದಾರೆ. ಸಭೆ ಕುರಿತು ಮಾಹಿತಿ ನೀಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಆರ್ಥಿಕ ಪರಿಸ್ಥಿತಿ ಮತ್ತು ಹೂಡಿಕೆ, ಬೆಳವಣಿಗೆಗೆ ಪೂರಕ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಲಾಯಿತು.
ಇದೇ ವೇಳೆ, ಕೇಂದ್ರ ಬಜೆಟ್ಗೆ ಸಂಬಂಧಿಸಿ ಆರ್ಥಿಕ ತಜ್ಞರಿಂದ ಅಭಿಪ್ರಾಯಗಳನ್ನೂ ಪಡೆಯಲಾಯಿತು ಎಂದು ಹೇಳಿದ್ದಾರೆ. ಇದೇ ವೇಳೆ, ಮೋದಿ ಅವರು ಸಹಕಾರ
ಒಕ್ಕೂಟ ವ್ಯವಸ್ಥೆ ಮತ್ತು ದೇಶದ ಅಭಿವೃದ್ಧಿ  ಗಾಗಿ ರಾಜ್ಯಗಳ ನಡುವೆ ಆರೋಗ್ಯಕರ ಸ್ಪರ್ಧೆಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಜತೆಗೆ ಪ್ರಧಾನಮಂತ್ರಿ ಜನಧನ್ ಯೋ ಜನೆ,
ಅಡುಗೆ ಅನಿಲ ಸಬ್ಸಿಡಿ ನೇರ ಗ್ರಾಹಕರ ಖಾತೆಗೆ ಜಮೆ, ಸ್ವಚ್ಛ ಭಾರತದಂಥ ಯೋಜನೆಗಳ ಕುರಿತು ಪ್ರಧಾನಿ ಮಾತನಾಡಿದ್ದಾರೆ. 8ರಂದು ಸಿಎಂಗಳ ಸಭೆ ನೀತಿ ಆಯೋಗದ ಆಡಳಿತ ಸಮಿತಿಯ ಮೊದಲ ಸಭೆ ಭಾನುವಾರ ನಡೆಯಲಿದೆ. ಈ ಸಮಿತಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳು ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT