ಜಿತನ್ ರಾಂ ಮಾಂಝಿ 
ದೇಶ

ಪ್ರಧಾನಿ ಜತೆ ರಾಜಕೀಯ ವಿಷಯಗಳನ್ನು ಚರ್ಚಿಸಿಲ್ಲ: ಸಿಎಂ ಮಾಂಝಿ

ನವದೆಹಲಿ: ಬಿಹಾರ ರಾಜ್ಯದ ಅಭಿವೃದ್ಧಿ ಮತ್ತು ಸ್ವಚ್ಛತಾ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಾಗಿದೆ ಹೊರತು ರಾಜಕೀಯ ವಿಷಯಗಳ ಕುರಿತಲ್ಲ ಎಂದು ಜೆಡಿಯು ಪಕ್ಷದ ಹಾಲಿ ಸಿಎಂ ಜಿತನ್ ರಾಂ ಮಾಂಝಿಯವರು ಹೇಳಿದ್ದಾರೆ.

ಜೆಡಿಯು ನಾಯಕ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಗದ್ದುಗೆ ಏರಲು ನಡೆಸುತ್ತಿರುವ ಪ್ರಯತ್ನದ ಬೆನ್ನಲ್ಲೇ ಇಂದು ಜಿತನ್ ರಾಮ್ ಮಾಂಝಿ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು.

ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಂಝಿ 'ನಾನು ಪ್ರಧಾನ ಮಂತ್ರಿಯನ್ನು ಬಿಹಾರದ ಅಭಿವೃದ್ಧಿ ಮತ್ತು ರಾಜ್ಯದ ಸ್ವಚ್ಛತಾ ವಿಷಯದ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಜೆಡಿಯು ನಾಯಕ ನಿತೀಶ್ ಕುಮಾರ್ ತನ್ನನ್ನು ಸಿಎಂ ಸ್ಥಾನದಿಂದ ಕೆಳಗಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಬಿಹಾರ ರಾಜ್ಯದ ಮಹಾದಲಿತರಿಗೆ ಮಾಡುತ್ತಿರುವ ಅನ್ಯಾಯವಾಗಿದೆ, ನಿತೀಶ್ ಕುಮಾರ್ ಅವರು ಅಧಿಕಾರವಿಲ್ಲದೆ ಬದುಕಲಾರರು ಹೀಗಾಗಿ ನನ್ನನ್ನು ವಿರುದ್ಧ ಮಸಲತ್ತು ಮಾಡುತ್ತಿದ್ದಾರೆ. ಇದರೊಂದಿಗೆ ನಿತೀಶ್ ರ ನಿಜಬಣ್ಣ ಬಯಲಾಗಿದೆ ಎಂದರು.

ನಿತೀಶ್ ಅವರನ್ನು ನನ್ನನ್ನು ರಬ್ಬರ್ ಸ್ಟಾಂಪ್ ಎಂದು ಭಾವಿಸಿದಂತಿದೆ. ಅದು ಅವರ ತಪ್ಪು ಕಲ್ಪನೆ ಎಂದು ಮಾಂಝಿ ಲೇವಡಿ ಮಾಡಿದ್ದಾರೆ. ನಾನು ಈಗಲು ಬಿಹಾರದ ಮುಖ್ಯಮಂತ್ರಿ. ನಾನು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT