ಅಪಘಾತದಲ್ಲಿ ಸಾವಿಗೀಡಾದ ಟಿವಿ.9 ಸುದ್ದಿ ವಾಚಕ ಬದ್ರಿ 
ದೇಶ

ಟಿವಿ.9 ಸುದ್ದಿ ವಾಚಕ ಅಪಘಾತದಲ್ಲಿ ಸಾವು, 4 ಗಾಯ

ಆಂಧ್ರಪ್ರದೇಶದ ಟಿವಿ.9 ಸುದ್ದಿ ವಾಹಿನಿಯಲ್ಲಿ ಸುದ್ದಿ ವಾಚಕನಾಗಿ ಖ್ಯಾತಿ ಗಳಿಸಿದ್ದ ಬದ್ರಿ (40) ರಸ್ತೆ ಅಪಘಾತ...

ರಾಜಮಂಡ್ರಿ: ಆಂಧ್ರಪ್ರದೇಶದ ಟಿವಿ.9 ಸುದ್ದಿ ವಾಹಿನಿಯಲ್ಲಿ ಸುದ್ದಿ ವಾಚಕನಾಗಿ ಖ್ಯಾತಿ ಗಳಿಸಿದ್ದ ಬದ್ರಿ (40) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಗೋದಾವರಿಯಲ್ಲಿ ನಡೆದಿದೆ.

ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಮದುವೆಗೆ ಹೋಗಲೆಂದು ಕುಟುಂಬಸ್ಥರೊಂದಿಗೆ ನಿನ್ನೆ ತೆರಳಿದ್ದರು. ಇಂದು ಬೆಳಗ್ಗೆ ತಿರುಗಿ ಮನೆಗೆ ಬರುವಾಗ ದ್ವಾರಕ ತಿರುಮಲ ಹಳ್ಳಿಯ ರಸ್ತೆ ಮಧ್ಯದಲ್ಲಿ ಅವರಿದ್ದ ಕಾರಿನ ಟೈರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇದೇ ವೇಳೆ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅವರ ಪತ್ನಿ, ಇಬ್ಬರು ಮಕ್ಕಳು ಹಾಗೂ ಅವರ ಭಾವ ಗಂಭೀರ ಗಾಯಗೊಂಡಿದ್ದು, ಟಿವಿ.9 ಸುದ್ದಿ ವಾಚಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಗೊಂಡವರನ್ನು ವಿಜಯವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾವನ್ನಪ್ಪಿದ್ದ ಸುದ್ದಿ ವಾಚಕ ಭದ್ರಿ ಅವರ ದೇಹವನ್ನು ಶವ ಪರೀಕ್ಷೆಗಾಗಿ ಯಲ್ಲೂರು ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT