ನಿತೀಶ್ ಕುಮಾರ್ 
ದೇಶ

ಸರ್ಕಾರ ರಚನೆಗೆ ಅವಕಾಶ ನೀಡದಿದ್ದರೆ ರಾಷ್ಟ್ರಪತಿ ಭವನದ ಮುಂದೆ ಪರೇಡ್: ನಿತೀಶ್

ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದ್ದು, ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯಪಾಲ ಕೇಸರಿನಾಥ್...

ಪಾಟ್ನಾ: ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದ್ದು, ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಪ್ರಸ್ತಾಪ ಮುಂದಿಟ್ಟಿದ್ದಾರೆ.

ನಿತೀಶ್ ಕುಮಾರ್ ಅವರು ಆರ್‌ಜೆಡಿ ಮತ್ತು ಕಾಂಗ್ರೆಸ್ ಸೇರಿದಂತೆ 130 ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು.

ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಬಜೆಟ್ ಅಧಿವೇಶನ ಆರಂಭವಾಗುವ ಮುನ್ನವೇ ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಬೇಕೆಂದು ರಾಜ್ಯಪಾಲರು ಹೇಳಿರುವುದಾಗಿ ತಿಳಿಸಿದರು.

ನಮಗೆ ಬಹುಮತ ಇದ್ದು, ಸರ್ಕಾರ ರಚಿಸಲು ಅವಕಾಶ ನೀಡಬೇಕು. 24 ಅಥವಾ 48 ಗಂಟೆಗಳಲ್ಲೇ ತಾವು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧ ಎಂದು ರಾಜ್ಯಾಪಾಲರಿಗೆ ತಿಳಿಸಿರುವುದಾಗಿ ನಿತೀಶ್ ಕುಮಾರ್ ಹೇಳಿದ್ದಾರೆ. ಅಲ್ಲದೆ ಒಂದು ವೇಳೆ ರಾಜ್ಯಪಾಲರು ತಮ್ಮ ಮನವಿಯನ್ನು ತಿರಸ್ಕರಿಸಿದರೆ ಶಾಸಕರೊಂದಿಗೆ ರಾಷ್ಟ್ರಪತಿ ಭವನದ ಮುಂದೆ ಪರೇಡ್ ನಡೆಸುವುದಾಗಿ ಹೇಳಿದ್ದಾರೆ.

ಇದೇ ವೇಳೆ ಪಕ್ಷದ ವಿರುದ್ಧವೇ ಬಂಡಾಯವೆದ್ದ್ದ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್, ಮಾಂಝಿ ಶಾಸಕರ ಕುದುರೆ ವ್ಯಾಪಾರ ನಡೆಸುತ್ತಿದ್ದು, ರಾಜ್ಯಪಾಲರು ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ