ನಿತೀಶ್ ಕುಮಾರ್ 
ದೇಶ

ಸರ್ಕಾರ ರಚನೆಗೆ ಅವಕಾಶ ನೀಡದಿದ್ದರೆ ರಾಷ್ಟ್ರಪತಿ ಭವನದ ಮುಂದೆ ಪರೇಡ್: ನಿತೀಶ್

ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದ್ದು, ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯಪಾಲ ಕೇಸರಿನಾಥ್...

ಪಾಟ್ನಾ: ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದ್ದು, ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಪ್ರಸ್ತಾಪ ಮುಂದಿಟ್ಟಿದ್ದಾರೆ.

ನಿತೀಶ್ ಕುಮಾರ್ ಅವರು ಆರ್‌ಜೆಡಿ ಮತ್ತು ಕಾಂಗ್ರೆಸ್ ಸೇರಿದಂತೆ 130 ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು.

ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಬಜೆಟ್ ಅಧಿವೇಶನ ಆರಂಭವಾಗುವ ಮುನ್ನವೇ ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಬೇಕೆಂದು ರಾಜ್ಯಪಾಲರು ಹೇಳಿರುವುದಾಗಿ ತಿಳಿಸಿದರು.

ನಮಗೆ ಬಹುಮತ ಇದ್ದು, ಸರ್ಕಾರ ರಚಿಸಲು ಅವಕಾಶ ನೀಡಬೇಕು. 24 ಅಥವಾ 48 ಗಂಟೆಗಳಲ್ಲೇ ತಾವು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧ ಎಂದು ರಾಜ್ಯಾಪಾಲರಿಗೆ ತಿಳಿಸಿರುವುದಾಗಿ ನಿತೀಶ್ ಕುಮಾರ್ ಹೇಳಿದ್ದಾರೆ. ಅಲ್ಲದೆ ಒಂದು ವೇಳೆ ರಾಜ್ಯಪಾಲರು ತಮ್ಮ ಮನವಿಯನ್ನು ತಿರಸ್ಕರಿಸಿದರೆ ಶಾಸಕರೊಂದಿಗೆ ರಾಷ್ಟ್ರಪತಿ ಭವನದ ಮುಂದೆ ಪರೇಡ್ ನಡೆಸುವುದಾಗಿ ಹೇಳಿದ್ದಾರೆ.

ಇದೇ ವೇಳೆ ಪಕ್ಷದ ವಿರುದ್ಧವೇ ಬಂಡಾಯವೆದ್ದ್ದ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್, ಮಾಂಝಿ ಶಾಸಕರ ಕುದುರೆ ವ್ಯಾಪಾರ ನಡೆಸುತ್ತಿದ್ದು, ರಾಜ್ಯಪಾಲರು ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT