ಅತ್ಯಾಚಾರ (ಸಾಂದರ್ಭಿಕ ಚಿತ್ರ) 
ದೇಶ

ಮತ್ತೊಂದು 'ಹತ್ಯಾಚಾರ' ಪ್ರಕರಣ: ಗುಪ್ತಾಂಗದಲ್ಲಿ ಮಡಕೆ, ಕಲ್ಲು ಚೂರು ಪತ್ತೆ

ದೆಹಲಿಯಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ ದಾಖಲಾಗಿದ್ದು, ಯುವತಿಯೊಬ್ಬಳ ಮೇಲೆ ಘೋರ ಸಾಮೂಹಿಕ 'ಹತ್ಯಾಚಾರ' ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ..

ನವದೆಹಲಿ: ದೆಹಲಿಯಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ ದಾಖಲಾಗಿದ್ದು, ಯುವತಿಯೊಬ್ಬಳ ಮೇಲೆ ಘೋರ ಸಾಮೂಹಿಕ ಹತ್ಯಾಚಾರ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮಹಿಳೆಯರಿಗೆ ರಾಷ್ಟ್ರ ರಾಜಧಾನಿ ಸುರಕ್ಷಿತವಲ್ಲ ಎಂಬ ಮಾತು ಮತ್ತೆ ಸಾಬೀತಾಗಿದ್ದು, ದೆಹಲಿ ಹೊರವಲಯದ ರೋಹ್‌ಟಕ್ ನಲ್ಲಿ 8 ಮಂದಿ ಕಾಮುಕರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಅತ್ಯಮಾನುಷವಾಗಿ ಕೊಲೆಗೈದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಸುಮಾರು 28 ವರ್ಷದ ಯುವತಿಯ ಶವ ರೋಹ್‌ಟಕ್ ಬಳಿ ಪತ್ತೆಯಾಗಿದ್ದು, ಮೃತ ದೇಹದ ಕೆಲ ಭಾಗಗಳನ್ನು ಬೀದಿನಾಯಿಗಳು ಕಿತ್ತುತಿಂದಿವೆ. ಅಮಾನುಷವೆಂದರೆ ಯುವತಿಯನ್ನು ತಮ್ಮ ಕಾಮತೃಷೆಗೆ ಬಳಸಿಕೊಂಡ ಕಾಮುಕರು ಆಕೆಯ ಗುಪ್ತಾಂಗಕ್ಕೆ ಮಡಿಕೆ ಚೂರುಗಳನ್ನು, ಕಲ್ಲಿನ ಚೂರುಗಳನ್ನು ಮತ್ತು ಕಾಂಡೋಮ್‌ಗಳನ್ನು ತುರುಕಿರುವುದು ಬೆಳಕಿಗೆ ಬಂದಿದೆ.

ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೇ ಬೆಚ್ಚಿಬಿದ್ದಿದ್ದು, ತಮ್ಮ 30 ವರ್ಷದ ಅನುಭವದಲ್ಲಿ ಇಂತಹ ಘೋರ ಪ್ರಕರಣವನ್ನು ಕಂಡಿರಲಿಲ್ಲ ಎಂದು ಹೇಳಿದ್ದಾರೆ. 'ಯುವತಿಯ ತಲೆಗೆ ಕಬ್ಬಿಣದ ರಾಡ್ ನಿಂದ ಬಲವಾಗಿ ಬಡಿಯಲಾಗಿದೆ. ಇದರಿಂದ ಆಕೆಯ ಪ್ರಜ್ಞೆ ಕಳೆದುಕೊಂಡಿದ್ದು, ಬಳಿಕ ಆಕೆಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿದೆ. ಮೃತ ದೇಹವನ್ನು ಬೀದಿ ನಾಯಿಗಳು ಮತ್ತು ಇಲಿಗಳು ಕಚ್ಚಿ ತಿಂದಿದ್ದು, ಪ್ರಮುಖ ಅಂಗಾಗಗಳೇ ನಾಪತ್ತೆಯಾಗಿವೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಎಸ್‌ಕೆ ದತ್ತರ್ ವಾಲ್ ಅವರು ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈ ಸಂಬಂಧ 8 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದು, ನಾಪತ್ತೆಯಾಗಿರುವ ಮತ್ತೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಬಂಧಿತ ಎಲ್ಲಾ 8 ಆರೋಪಿಗಳು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ಈ ಎಲ್ಲ ವಿದ್ಯಮಾನಗಳಿಂದ ವಿಚಲಿತರಾಗಿರುವ ಮೃತ ಯುವತಿಯ ತಂಗಿ 'ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT