ಅಣ್ಣಾ ಹಜಾರೆ-ಅರವಿಂದ್ ಕೇಜ್ರಿವಾಲ್‌ 
ದೇಶ

ಕೇಜ್ರಿವಾಲ್-ಅಣ್ಣಾ ಹಜಾರೆ ಪರಸ್ಪರ ಅಭಿನಂದನೆ

ದೆಹಲಿ ಜನತೆ ಸರಿಯಾದ ಆಯ್ಕೆ ಮಾಡಿದ್ದಾರೆ ಎನ್ನುವುದರ ಮೂಲಕ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅರವಿಂದ್ ಕೇಜ್ರಿವಾಲ್‌ಗೆ ಅಭಿನಂದನೆ...

ನವದೆಹಲಿ: ದೆಹಲಿ ಜನತೆ ಸರಿಯಾದ ಆಯ್ಕೆ ಮಾಡಿದ್ದಾರೆ ಎನ್ನುವುದರ ಮೂಲಕ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅರವಿಂದ್ ಕೇಜ್ರಿವಾಲ್‌ಗೆ ಅಭಿನಂದನೆ ಸಲ್ಲಿಸಿದ್ದರೆ, ಅತ್ತ ಅರವಿಂದ್ ಕೇಜ್ರಿವಾಲ್ ಅವರು ಅಣ್ಮಾ ಹಜಾರೆ ಅವರಿಗೆ ಕರೆ ಮಾಡಿ ಆಶೀರ್ವಾದಿಸಿ ಎಂದು ಕೇಳಿದ್ದಾರೆ.

ದೆಹಲಿಯ ಜನತೆ ನನ್ನನ್ನು ಆಶೀರ್ವಾದಿಸಿದ್ದಾರೆ, ಈಗ ತಮ್ಮ ಆಶೀರ್ವಾದ ಬಹಳ ಮುಖ್ಯ. ಉತ್ತಮ ಆಡಳಿತ ನಡೆಸಲು ತಮ್ಮ ಹಿರಿಯರ ಸಲಹೆ ಅಗತ್ಯ ಎಂದು ಕೇಜ್ರಿವಾಲ್ ಅಣ್ಣಾ ಹಜಾರೆ ಅವರಿಗೆ ತಿಳಿಸಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಗೆಲವು ಸಾಧಿಸುವುದು ಬಹುತೇಕ ಖಚಿತವಾದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾ ಹಜಾರೆ, ಅರವಿಂದ ಕೇಜ್ರಿವಾಲ್ ದೆಹಲಿ ಜನರ ವಿಶ್ವಾಸ ಗೆದ್ದಿದ್ದಾರೆ. ಹಾಗಾಗಿ, ಕೇಜ್ರಿವಾಲ್‌ರನ್ನ ಮತದಾರರು ಗೆಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಗೆಲುವು ದೆಹಲಿ ಜನತೆಯ ಗೆಲುವಾಗಿದೆ. ಕೇಜ್ರಿವಾಲ್ ಜನರ ಪರ ಹೋರಾಟ ಮಾಡ್ತಾರೆ ಅನ್ನೋ ನಂಬಿಕೆ ಮತದಾರರಿಗೆ ಇತ್ತು. ಮೊದಲಿನಿಂದಲೂ ನಮ್ಮ ಜತೆ ಕೇಜ್ರಿವಾಲ್ ಹೋರಾಟ ಮಾಡುತ್ತಾ ಬಂದಿದ್ದರು. ಭ್ರಷ್ಟಾಚಾರದ ವಿರುದ್ಧ ನಮ್ಮ ಜತೆ ಸೇರಿ ದನಿ ಎತ್ತಿದ್ದರು. ಕೇಜ್ರಿವಾಲ್ ಹೋರಾಟವನ್ನ ಮರೆಯಬಾರದು ಎಂದು ಹಜಾರೆ ತಿಳಿಸಿದ್ದಾರೆ.

ಆಪ್ ಗೆಲುವಿಗೆ ಅರವಿಂದ್ ಕೇಜ್ರಿವಾಲ್‌ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಅವರು ಕೇಜ್ರಿವಾಲ್ ಮತ್ತೆ ಈ ಹಿಂದಿನಂತೆ ತಪ್ಪು ಮಾಡುವುದಿಲ್ಲ ಎಂದು ನಾನು  ಭಾವಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT