ದೇಶ

ಭೂಗತ ಪಾತಕಿ ಬನ್ನಂಜೆ ರಾಜಾ ಬಂಧನ

ಭೂಗತ ಪಾತಕಿ ಬನ್ನಂಜೆ ರಾಜಾನನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ...

ಈಜಿಪ್ಟ್: ಭೂಗತ ಪಾತಕಿ ಬನ್ನಂಜೆ ರಾಜಾನನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ, ಭಾರತದ ಗುಪ್ತಚರ ಇಲಾಖೆಯ ವಿಶೇಷ ತನಿಖಾ ತಂಡ ಮೊರಾಕೋದಲ್ಲಿರುವ ಕಸಬ್ಲಂಕದಲ್ಲಿ ಬನ್ನಂಜೆ ರಾಜಾನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಈತ ಕೊಲೆ, ಲೂಟಿ, ಅಪಹರಣ ಸೇರಿದಂತೆ ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ವಾಂಟೆಡ್ ಪಟ್ಟಿಯಲ್ಲಿದ್ದನು. ಈತನ ವಿರುದ್ಧ ರೆಡ್ ಕಾರ್ನರ್ ನೋಟೀಸ್ ಹೊರಡಿಸಲಾಗಿತ್ತು.

ಭಾರತದ ಹೋಟೆಲ್ ಉದ್ಯಮಿಯೊಬ್ಬರಿಂದ 5 ಕೋಟಿ ಹಣ ನೀಡುವಂತೆ ಬೆದರಿಕೆ ಹಾಕಿದ್ದನು. ಆಗ ಹೋಟೆಲ್ ಉದ್ಯಮಿ ಹಣ ನೀಡದೆ, ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ಕೈಗೊಂಡ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಬನ್ನಂಜೆ ರಾಜಾ ಮರಾಕೋದಲ್ಲಿ ಹೆಗ್ಡೆ ಎಂಬ ಹೆಸರಿನಲ್ಲಿ ಅಡಗಿಕೊಂಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

ಮಾರಕೋದಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಬನ್ನಂಜೆ ರಾಜಾ ಭಾಗಿಯಾಗಿಲ್ಲ. ಸ್ಥಳೀಯ ಪೊಲೀಸರು ಈತನ ವಿರುದ್ಧ ದಾಖಲಾಗಿರುವ ದೂರುಗಳ ಬಗ್ಗೆ ಮಾಹಿತಿ ನೀಡಲು 48 ಕಾಲ ಗಡುವು ನೀಡಿದ್ದಾರೆ. ಆದಷ್ಟೂ ಬೇಗ ಬೆಂಗಳೂರು ಪೊಲೀಸರು ಮಾರಾಕೋಗೆ ತೆರಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮದು 4ನೇ ಅತಿದೊಡ್ಡ ಆರ್ಥಿಕತೆ ಎಂದು ಭಾರತ ಹೇಳಿಕೊಳ್ಳುತ್ತಿದೆ; ಆದರೆ ತಲಾವಾರು ಜಿಡಿಪಿ 12 ಪಟ್ಟು ಕಡಿಮೆ!

ಬಾಂಗ್ಲಾದೇಶದಲ್ಲಿ ಮತ್ತೊಬ್ಬ 'ಹಿಂದೂ' ಗುಂಡೇಟಿಗೆ ಬಲಿ: ಎರಡು ವಾರಗಳಲ್ಲಿ ಮೂರನೇ ಕೊಲೆ!

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್​​ ರಿಲೀಫ್​: ED ಪ್ರಕರಣದಲ್ಲಿ ಜಾಮೀನು ಮಂಜೂರು

ಹಿನ್ನೋಟ 2025: ಬೀದಿ ನಾಯಿ ಪ್ರಕರಣದಿಂದ ಅರಾವಳಿ ಬೆಟ್ಟದವರೆಗೆ.. ಸುಪ್ರೀಂ ಕೋರ್ಟ್ ನೀಡಿದ ಪ್ರಮುಖ ತೀರ್ಪುಗಳು!

BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ

SCROLL FOR NEXT