ನಿತೀಶ್ ಕುಮಾರ್ 
ದೇಶ

ರಾಜ್ಯಪಾಲರು ದೆಹಲಿ ಆದೇಶ ಪಾಲಿಸುತ್ತಿದ್ದಾರೆ: ನಿತೀಶ್

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು, ಬಿಹಾರ ರಾಜ್ಯಪಾಲರು ದೆಹಲಿಯಿಂದ ಬರುವ ನಿರ್ದೇಶನ ಪಾಲಿಸುತ್ತಿದ್ದಾರೆ ಎಂದು ಗುರುವಾರ ಆರೋಪಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಅವಕಾಶ ನೀಡುವ ಮೂಲಕ ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ ಎಂದು ನಿತೀಶ್ ಕುಮಾರ್ ದೂರಿದ್ದಾರೆ. ಅಲ್ಲದೆ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯಪಾಲರು ಮಾಂಝಿಗೆ ತಕ್ಷಣ ಬಹುಮತ ಸಾಬೀತುಪಡಿಸುವಂತೆ ಸೂಚಿಸಬೇಕು ಎಂದು ನಾವು ಒತ್ತಾಯಿಸಿದ್ದೇವು. ಆದರೆ ರಾಜ್ಯಾಪಾಲರು ಮೊದಲು ಈ ಕುರಿತು ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡಿದರು. ಬಳಿಕ ಫೆಬ್ರವರಿ 20ರಂದು ಬಹುಮತ ಸಾಬೀತಿಗೆ ಸೂಚಿಸುವ ಮೂಲಕ ಸಾಕಷ್ಟು ಸಮಯವಕಾಶ ನೀಡಲಾಗಿದೆ. ಇದರಿಂದ ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದಂತಾಗಿದೆ ಎಂದು ದೂರಿದ್ದಾರೆ.

ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿರುವ ನಿತೀಶ್ ಕುಮಾರ್, ಬಿಜೆಪಿ ಅಗತ್ಯ ಬಿದ್ದರೆ ತನ್ನ 35 ಶಾಸಕರ ಬೆಂಬಲ ನೀಡುವುದಾಗಿ ಸಹ ಮಾಂಝಿಗೆ ಮಾತು ಕೊಟ್ಟಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT