ದೇಶ

ಉಗ್ರ ನಿಧಿಗೆ ಭಾರತ, ಅಮೆರಿಕ ಬ್ರೇಕ್

ಭಯೋತ್ಪಾದನೆ ನಿಧಿಗೆ ತಡೆಯೊಡ್ಡುವ ನಿಟ್ಟಿನಲ್ಲಿ ಭಾರತ ಮತ್ತು ಅಮೆರಿಕ ಮಹತ್ವದ ಹೆಜ್ಜೆಯಿಟ್ಟಿದೆ...

ನವದೆಹಲಿ: ಭಯೋತ್ಪಾದನೆ ನಿಧಿಗೆ ತಡೆಯೊಡ್ಡುವ ನಿಟ್ಟಿನಲ್ಲಿ ಭಾರತ ಮತ್ತು ಅಮೆರಿಕ ಮಹತ್ವದ ಹೆಜ್ಜೆಯಿಟ್ಟಿದೆ. ಪಾಕ್ ಮೂಲದ ಲಷ್ಕರ್, ಜೆಯುಡಿ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂನಿಂದ ಉಗ್ರ ಚಟುವಟಿಕೆಗೆ ಹಣ ಸಂಗ್ರಹವಾಗುತ್ತಿರುವುದನ್ನು ನಿಲ್ಲಿಸಲು, ಅವರ ಹಣಕಾಸು ಜಾಲದ ಮೇಲೆ ದಾಳಿ ನಡೆಸಲು ಎರಡೂ ರಾಷ್ಟ್ರಗಳು ಕೈಜೋಡಿಸಿವೆ.

ಇವು ಭಯೋತ್ಪಾದನೆ, ಹಣಕಾಸು ಅವ್ಯವಹಾರ ಮತ್ತು ಇತರೆ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವ ಒಪ್ಪಂದಕ್ಕೆ ಬಂದಿವೆ. ಅಮೆರಿಕ ಖಜಾನೆ ಕಾರ್ಯದರ್ಶಿ ಜಾಕೋಬ್ ಜೆ.ಲ್ಯೂ ಮತ್ತು ಕೇಂದ್ರ ಸಚಿವ ಅರುಣ್ ಜೇಟ್ಲಿ ನಡುವೆ ನಡೆದ ಹಣಕಾಸು ಪಾಲುಗಾರಿಕೆ ಮಾತುಕತೆ ವೇಳೆ ಈ ಒಪ್ಪಂದ ಮಾಡಿಕೊಳ್ಳಲಾಗಿದೆ.

ಇದೇ ವೇಳೆ, 46ನೇ ರಾಜ್ಯಪಾಲ ಸಮಾವೇಶದಲ್ಲಿ ಗುರುವಾರ ಮಾತನಾಡಿದ ಪ್ರಧಾನಿ ಮೋದಿ, ಪಾಕಿಸ್ತಾನದಲ್ಲಿ ಉಗ್ರರ ಜಾಲ ವಿಸ್ತರಿಸುತ್ತಿರುವುದು ಮತ್ತು ಭಾರತದಲ್ಲಿನ ಉಗ್ರ ಕೃತ್ಯಕ್ಕೆ ಪಾಕ್‌ನ ಪ್ರೇರಣೆ ಭಾರತಕ್ಕೀರುವ ಅತಿದೊಡ್ಡ ಭದ್ರತಾ ಸವಾಲು ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT