ದೇಶ

ಅಜ್ಜಿಯನ್ನೇ ಕೊಂದ ಮೊಮ್ಮಗ, ಸ್ನೇಹಿತ ಸೆರೆ

ಬೆಂಗಳೂರು: ಮದ್ಯಪಾನ ಮಾಡಲು ಹಣ ನೀಡಿಲ್ಲ ಎನ್ನುವ ಕಾರಣಕ್ಕೆ ಸ್ವಂತ ಅಜ್ಜಿಯನ್ನೇ ಕೊಂದ ಮೊಮ್ಮಗ ಹಾಗೂ ಆತನ ಸ್ನೇಹಿತನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ಫೆ.3ರ ರಾತ್ರಿ 1 ಗಂಟೆ ಸುಮಾರಿಗೆ ಯಲಹಂಕ ಚೌಡೇಶ್ವರಿ ಬಡಾವಣೆ 1 ನೇ ಮುಖ್ಯ ರಸ್ತೆಯಲ್ಲಿ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ ಈಶ್ವರಮ್ಮ(75) ಎಂಬುವರನ್ನು ಕೊಲೆ ಮಾಡಿದ್ದ ಆಂದ್ರಪ್ರದೇಶ ಚಿತ್ತೂರು ಜಿಲ್ಲೆಯ ಧನಂಜಯ (38) ಹಾಗೂ ಈತನ ಸ್ನೇಹಿತ ವೆಂಕಟೇಶ್ವರ್ (34) ಬಂಧಿತರು. ಮತ್ತೊಬ್ಬ ಆರೋಪಿ ಪೆದ್ದಾರೆಡ್ಡಿ ಎಂಬಾತ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಶ್ವರಮ್ಮ ಅವರ ಪತಿ ಲಕ್ಷ್ಮೀನಾರಾಯಣ 5 ವರ್ಷಗಳ ಹಿಂದೆ ನಿಧನರಾಗಿದ್ದರು. ಅದೇ ಪ್ರದೇಶದಲ್ಲೇ ಮೂವರು ಮಕ್ಕಳು ವಾಸವಿದ್ದರು. ಈಶ್ವರಮ್ಮ ಅವರ ಮೊಮ್ಮಗ ಧನಂಜಯ ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದ. ಆದರೆ, ಮದುವೆಯಾದ ಬಳಿಕ ಆಂಧ್ರಪ್ರದೇಶಕ್ಕೆ ತೆರಳಿದ್ದ. ಆರೋಪಿ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಸ್ನೇಹಿತರೊಂದಿಗೆ ಸೇರಿ ಮದ್ಯಪಾನ ಮಾಡುತ್ತಿದ್ದ. ಬೆಂಗಳೂರಿಗೆ ಬಂದಾಗ ಅಜ್ಜಿ ಈಶ್ವರಮ್ಮ ಬಳಿ ರು. 50 ಅಥವಾ 100 ಪಡೆದು ಮದ್ಯಪಾನ ಮಾಡುತ್ತಿದ್ದ. ಆದರೆ, ಇತ್ತೀಚೆಗೆ ಅಜ್ಜಿ ಹಣ ನೀಡುವುದನ್ನು ನಿಲ್ಲಿಸಿದ್ದಳು. ಇದರಿಂದ ಕುಪಿತಗೊಂಡಿದ್ದ ಧನಂಜಯ ಸ್ನೇಹಿತನೊಡನೆ ಸೇರಿ ಕೊಲೆ ಮಾಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT