ದೇಶ

ಖ್ಯಾತ ಕಿರುತೆರೆ ನಟಿ ದೀಪ್ತಿ ಆತ್ಮಹತ್ಯೆಗೆ ಶರಣು

ಟಾಲಿವುಡ್‌ನ ಅರಳುವ ಪ್ರತಿಭೆ ಕಿರುತೆರೆ ನಟಿ ದೀಪ್ತಿ (ರಾಮಲಕ್ಷ್ಮಿ) ನೇಣುಬಿಗಿದುಕೊಂಡು ಆತ್ಮಹತ್ಯೆಗೆ...

ನವದೆಹಲಿ: ಟಾಲಿವುಡ್‌ನ ಅರಳುವ ಪ್ರತಿಭೆ ಕಿರುತೆರೆ ನಟಿ ದೀಪ್ತಿ (ರಾಮಲಕ್ಷ್ಮಿ) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ಫತೇಹ್‌ನಗರದಲ್ಲಿ ನಡೆದಿದೆ.

ಪಶ್ಚಿಮ ಗೋದಾವರಿಯ ಕಿರಿತೆರೆ ನಟಿಯಾಗಿದ್ದ ದೀಪ್ತಿ (30) ಹಲವು ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಇಂದು ಬೆಳಿಗ್ಗೆ ಅವರಿದ್ದ ಫತೇಹ್‌ನಗರದ ಆಪಾರ್ಟ್‌ಮೆಂಟ್ ರೂಂನಲ್ಲಿ ಇದ್ದಕ್ಕಿದ್ದಂತೆ ನೇಣು ಬಿಗುದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಿಮಿಸಿದ ಪೊಲೀಸರಿಗೆ ಸ್ಥಳದಲ್ಲಿ ದೀಪ್ತಿಯವರ ಐಪಾಡ್ ದೊರಕಿದೆ. ಪರಿಶೀಲನೆ ನಡೆಸಿದಾಗ ಅದರಲ್ಲಿ ದೀಪ್ತಿ ನೇಣು ಹಾಕಿಕೊಳ್ಳುವ ಚಿತ್ರ ದೊರಕಿದೆ. ಆದರೆ ಆತ್ಮಹತ್ಯೆಯ ಕುರಿತಂತೆ ಈ ವರೆಗೂ ಕಾರಣ ತಿಳಿದುಬಂದಿಲ್ಲ. ನಟಿಯ ದೇಹವನ್ನು ಈಗಾಗಲೇ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT