ದೇಶ

ಶಿವರಾತ್ರಿ ಆಚರಣೆಗೆ ಪಾಕ್‍ಗೆ ಹೋದ ಹಿಂದೂಗಳು

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಐತಿಹಾಸಿಕ ಕತಾಸ್ ರಾಜ್ ದೇಗುಲದಲ್ಲಿ ಶಿವರಾತ್ರಿ ಆಚರಣೆಗಾಗಿ ಭಾರತದಿಂದ 21 ಮಂದಿ ಹಿಂದೂಗಳು ತೆರಳಿದ್ದಾರೆ.

ವಾಘಾ ಗಡಿ ಮೂಲಕ ತೆರಳಿದ ಅವರನ್ನು ಪಾಕಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಪ್ರಾರ್ಥನಾ ಸ್ಥಳಗಳ ಉಸ್ತುವಾರಿ ವಹಿಸಿರುವ ಸಂಸ್ಥೆಯ ಅಧಿಕಾರಿಗಳು ಬರಮಾಡಿಕೊಂಡರು. ಲಾಹೋರ್‍ನಿಂದ 271 ಕಿಮೀ ದೂರದ ಚಕ್ವಾಲ್ ಜಿಲ್ಲೆಯಲ್ಲಿ ಐತಿಹಾಸಿಕ ಕತಾಸ್ ದೇಗುಲ ಇದೆ. ಅದಕ್ಕೆ ಸುಮಾರು 900 ವರ್ಷಗಳ ಇತಿಹಾಸ ಇದೆ.

ಅಲ್ಪಸಂಖ್ಯಾತರ ಪ್ರಾರ್ಥನಾ ಸ್ಥಳಗಳ ಉಸ್ತುವಾರಿ ಹೊತ್ತಿರುವ ಸಂಸ್ಥೆಯ ಅಧಿಕಾರಿಗಳು ಮಾತನಾಡಿ, ಭಾರತದಿಂದ ಕನಿಷ್ಠ 100 ಮಂದಿ ಹಿಂದೂಗಳು ಮೂರು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ ಕೇವಲ 21 ಮಂದಿ ಆಗಮಿಸಿದ್ದಾರೆ ಎಂದಿದ್ದಾರೆ. ಅವರು ಫೆ.21ರಂದು ಭಾರತಕ್ಕೆ ವಾಪಸಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT