ಜೈರಾಂ ರಮೇಶ್ 
ದೇಶ

ರಾಹುಲ್, ಸೋನಿಯಾ ಹಸ್ತಕ್ಷೇಪ ಮಾಡಿಲ್ಲ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವತ್ತೂ ಪರಿಸರ ಸಚಿವಾಲಯದ ಕೆಲಸ ಕಾರ್ಯದಲ್ಲಿ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವತ್ತೂ ಪರಿಸರ ಸಚಿವಾಲಯದ ಕೆಲಸ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್ ಹೇಳಿದ್ದಾರೆ.

ರಾಹುಲ್ ಗಾಂಧಿ ಪರಿಸರ ಸಚಿವಾಲಯದ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರು ಎಂದು ಮಾಜಿ ಸಚಿವೆ ಜಯಂತಿ ನಟರಾಜನ್ ಇತ್ತೀಚೆಗೆ ಆರೋಪಮಾಡಿದ್ದರು. ಅದಕ್ಕೆ ರಮೇಶ್ ಈ ಪ್ರತಿಕ್ರಿಯೆ ನೀಡಿದ್ದಾರೆ.

2009ರಿಂದ 11ರ ವರೆ-ಗೆ ಪರಿಸರ ಸಚಿವರಾಗಿದ್ದ ಅವಧಿಯನ್ನು ಮುಖ್ಯವಾಗಿಟ್ಟುಕೊಂಡು ತಾವು ಬರೆದ `ಗ್ರೀನ್ ಸಿಗ್ನಲ್ಸ್' ಕೃತಿ ಬಿಡುಗಡೆಗೂ ಮುನ್ನ ಜೈರಾಂ ಈ ಹೇಳಿಕೆ ನೀಡಿದ್ದಾರೆ. ಜೈರಾಂ ಅವರು ಜಯಂತಿ ನಟರಾಜನ್ ಅವರಿಗಿಂತ ಮೊದಲು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವರಾಗಿದ್ದರು. ಮೆಗಾ ಯೋಜನೆಗಳಿಗೆ ಸಂಬಂಧಿಸಿ ರಾಹುಲ್ ಕೆಲವು ನಿರ್ದೇಶನ ನೀಡುತ್ತಿದ್ದರು.

ಈ ಯೋಜನೆಗಳು ಅನುಷ್ಠಾನವಾಗದ್ದಕ್ಕೆ ಕೊನೆಗೆ ತನ್ನನ್ನೇ ಹರಕೆಯ ಕುರಿ ಮಾಡಿದರು ಎಂದು ಜಯಂತಿ ಆರೋಪಿಸಿದ್ದರು. ಜಯಂತಿ ಆರೋಪದ ಕುರಿತು ಯಾವುದೇ ಹೇಳಿಕೆ ನೀಡಲು ನಿರಾಕರಿಸಿರುವ ಜೈರಾಂ, ಆ ಕುರಿತು ಅವರನ್ನೇ ಕೇಳಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT