ಜೈರಾಂ ರಮೇಶ್ 
ದೇಶ

ರಾಹುಲ್, ಸೋನಿಯಾ ಹಸ್ತಕ್ಷೇಪ ಮಾಡಿಲ್ಲ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವತ್ತೂ ಪರಿಸರ ಸಚಿವಾಲಯದ ಕೆಲಸ ಕಾರ್ಯದಲ್ಲಿ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವತ್ತೂ ಪರಿಸರ ಸಚಿವಾಲಯದ ಕೆಲಸ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್ ಹೇಳಿದ್ದಾರೆ.

ರಾಹುಲ್ ಗಾಂಧಿ ಪರಿಸರ ಸಚಿವಾಲಯದ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರು ಎಂದು ಮಾಜಿ ಸಚಿವೆ ಜಯಂತಿ ನಟರಾಜನ್ ಇತ್ತೀಚೆಗೆ ಆರೋಪಮಾಡಿದ್ದರು. ಅದಕ್ಕೆ ರಮೇಶ್ ಈ ಪ್ರತಿಕ್ರಿಯೆ ನೀಡಿದ್ದಾರೆ.

2009ರಿಂದ 11ರ ವರೆ-ಗೆ ಪರಿಸರ ಸಚಿವರಾಗಿದ್ದ ಅವಧಿಯನ್ನು ಮುಖ್ಯವಾಗಿಟ್ಟುಕೊಂಡು ತಾವು ಬರೆದ `ಗ್ರೀನ್ ಸಿಗ್ನಲ್ಸ್' ಕೃತಿ ಬಿಡುಗಡೆಗೂ ಮುನ್ನ ಜೈರಾಂ ಈ ಹೇಳಿಕೆ ನೀಡಿದ್ದಾರೆ. ಜೈರಾಂ ಅವರು ಜಯಂತಿ ನಟರಾಜನ್ ಅವರಿಗಿಂತ ಮೊದಲು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವರಾಗಿದ್ದರು. ಮೆಗಾ ಯೋಜನೆಗಳಿಗೆ ಸಂಬಂಧಿಸಿ ರಾಹುಲ್ ಕೆಲವು ನಿರ್ದೇಶನ ನೀಡುತ್ತಿದ್ದರು.

ಈ ಯೋಜನೆಗಳು ಅನುಷ್ಠಾನವಾಗದ್ದಕ್ಕೆ ಕೊನೆಗೆ ತನ್ನನ್ನೇ ಹರಕೆಯ ಕುರಿ ಮಾಡಿದರು ಎಂದು ಜಯಂತಿ ಆರೋಪಿಸಿದ್ದರು. ಜಯಂತಿ ಆರೋಪದ ಕುರಿತು ಯಾವುದೇ ಹೇಳಿಕೆ ನೀಡಲು ನಿರಾಕರಿಸಿರುವ ಜೈರಾಂ, ಆ ಕುರಿತು ಅವರನ್ನೇ ಕೇಳಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT