ನರೇಂದ್ರ ಮೋದಿ 
ದೇಶ

ಸಪ್ತ ಶಕ್ತಿ ಸದ್ಬಳಕೆ ಮಾಡಿ ಸಾಂಪ್ರದಾಯಿಕ ಇಂಧನ ಕ್ಷೇತ್ರದಲ್ಲಿನ ಕೊರತೆ ನೀಗಿಸಿ: ಮೋದಿ

ಅಣು, ಜಲ, ಉಷ್ಣ, ಗ್ಯಾಸ್, ಸೂರ್ಯ, ಗಾಳಿ, ಬಯೋ- ಗ್ಯಾಸ್ ಶಕ್ತಿಯ ಏಳು ಕುದುರೆಗಳು. ಭಾರತ ಅವುಗಳ...

ನವದೆಹಲಿ: ಅಣು, ಜಲ, ಉಷ್ಣ, ಗ್ಯಾಸ್, ಸೂರ್ಯ, ಗಾಳಿ, ಬಯೋ- ಗ್ಯಾಸ್ ಶಕ್ತಿಯ ಏಳು ಕುದುರೆಗಳು. ಭಾರತ ಅವುಗಳ ಪೈಕಿ ಉಷ್ಣ, ಅಣು, ಗ್ಯಾಸ್, ಜಲ ಶಕ್ತಿಯನ್ನಷ್ಟೇ ಈವರೆಗೆ ಭಾರತ ಸರಿಯಾಗಿ ಬಳಸಿಕೊಂಡಿದೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ.

ಸಾಂಪ್ರದಾಯಿಕ ಇಂಧನ ಕ್ಷೇತ್ರದಲ್ಲಿನ ಕೊರತೆ ನೀಗಿಸಲು ನವೀಕೃತ ಶಕ್ತಿ ಮೂಲಗಳನ್ನು ಬಳಕೆ ಮಾಡಬೇಕು. ಈ ನಿಟ್ಟಿನಲ್ಲಿ ಹೊಸ ಶೋಧನೆಗಳಾಗಬೇಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ (ಆರ್‍ಇ- ಇನ್ವೆಸ್ಟ್) ಸಂಬಂಧಿಸಿ ಭಾನುವಾರ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಮೊದಲ ಹೂಡಿಕೆದಾರರ ಸಮ್ಮೇಳನದಲ್ಲಿ ಪ್ರಧಾನಿ ಈ ಸಲಹೆ ನೀಡಿದ್ದಾರೆ.

ಹೊಸ ಒಕ್ಕೂಟ: ಸೂರ್ಯ ಶಕ್ತಿ ಹೆಚ್ಚಾಗಿರುವ 50 ರಾಷ್ಟ್ರಗಳ ಒಕ್ಕೂಟ ರಚಿಸಲು ಭಾರತ ಪ್ರಯತ್ನಿಸುತ್ತಿದೆ. ಈ ಮೂಲಕ ನವೀಕೃತ ಇಂಧನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ತಾಂತ್ರಿಕ ಸಾಧನೆಗಳನ್ನು ಮಾಡಿ, ಅದರ ಮೂಲಕ ಬಡವರು ಹಾಗೂ ಕುಗ್ರಾಮಗಳಿಗೂ ವಿದ್ಯುತ್ ದೊರೆಯುವಂತೆ ಮಾಡುವುದು ಉದ್ದೇಶವಾಗಿದೆ ಎಂದರು.

ವಿಶ್ವವನ್ನು ಮೆಚ್ಚಿಸಲು ನಾನು ಈ ರೀತಿ ನವೀಕರಿಸಬಹುದಾದ ಇಂಧನದ ಕುರಿತು ಆಸಕ್ತಿ ತೋರುತ್ತಿಲ್ಲ. ಬದಲಾಗಿ ದೇಶದ ಜನರ ವಿದ್ಯುತ್ ಬೇಡಿಕೆಯನ್ನು ನಿವಾರಿಸುವುದೇ ನನ್ನ ಮುಖ್ಯ ಗುರಿ ಆಗಿದೆ ಎಂದು ಮೋದಿ ತಿಳಿಸಿದ್ದಾರೆ. ದೇಶದ ಪ್ರತಿ ಮನೆಗೆ ಕೂಡ ವಿದ್ಯುತ್ ದೊರೆಯದೇ ಇದ್ದರೆ ಅಭಿವೃದ್ಧಿಯ ಫಲ ದೊರಕುವುದಿಲ್ಲ ಎಂದೂ ಹೇಳಿದ್ದಾರೆ ಪ್ರಧಾನಿ ಮೋದಿ.

ಕಡಿಮೆ ಖರ್ಚು: ಸತತ ಸಂಶೋಧನೆ ಫಲವಾಗಿ ಪ್ರತಿ ಸೋಲಾರ್ ವಿದ್ಯುತ್ ಉತ್ಪಾದನಾ ವೆಚ್ಚ ರು. 20 ರಿಂದ ರು. 7.50ಕ್ಕೆ ಇಳಿಕೆಯಾಗಿದೆ. ಮುಂದಿನ ದಿನಗಳಲ್ಲಿ ಅದೂ ಇಳಿಕೆಯಾಗಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT