ಮಾಜಿ ಪಶ್ಚಿಮ ಬಂಗಾಳ ಡಿಜಿಪಿ ರಜತ್ ಮಜುಂದಾರ್ 
ದೇಶ

ಶಾರದಾ ಚಿಟ್‌ಫಂಡ್: ರಜತ್ ಮಜುಂದಾರ್‌ಗೆ ಷರತ್ತುಬದ್ಧ ಜಾಮೀನು

ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪಶ್ಚಿಮ ಬಂಗಾಳ...

ಕೋಲ್ಕತಾ: ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪಶ್ಚಿಮ ಬಂಗಾಳ ಡಿಜಿಪಿ ರಜತ್ ಮಜುಂದಾರ್ ಅವರಿಗೆ ಕೋಲ್ಕತಾ ಹೈ ಕೋರ್ಟ್ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಇಂದು ವಿಚಾರಣೆ ನಡೆಸಿದೆ ಸುಬ್ರೊಕಮಲ್ ಮುಖರ್ಜಿ ನೇತೃತ್ವದ ಪೀಠವು ರಜತ್ ಮಜುಂದಾರ್ ಅವರಿಗೆ 1 ಲಕ್ಷ ಭದ್ರತಾ ಠೇವಣಿ ಮತ್ತು ಶ್ಯೂರಿಟಿ ನೀಡಿ ಜಾಮೀನು ಪಡೆಯಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. ಅಲ್ಲದೆ ಕೋಲ್ಕತಾ ರಾಜ್ಯ ಬಿಟ್ಟು ಎಲ್ಲಿಯೂ ತೆರಳದಂತೆಯೂ ಮತ್ತು ಪೊಲೀಸರ ವಿಚಾರಣೆಗೆ ಸಹಕರಿಸಬೇಕು ಎಂದು ಅವರು ತಾಕೀತು ಮಾಡಿದ್ದಾರೆ. ಒಂದು ವೇಳೆ ಷರತ್ತುಗಳನ್ನು ಉಲ್ಲಂಘಿಸಿದರೆ ಮತ್ತೆ ಬಂಧಿನಕ್ಕೆ ಆದೇಶ ನೀಡಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಶಾರದಾ ಚಿಟ್ ಫಂಡ್ ಸಂಸ್ಥೆಯಲ್ಲಿ ರಜತ್ ಮಜುಂದಾರ್ ಅವರು ಭದ್ರತಾ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತದ್ದರು. ಈ ಹಿನ್ನೆಲೆಯಲ್ಲಿ ಹಗರಣವನ್ನು ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿಗಳು 2014 ಸೆಪ್ಟೆಂಬರ್‌ನಲ್ಲಿ ಪಶ್ಚಿಮ ಬಂಗಾಳದಲ್ಲಿದ್ದ ರಜತ್ ಮಜುಂದಾರ್ ಅವರ ನಿವಾಸದ ಮೇಲೆಯೂ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ರಜತ್ ಅವರನ್ನು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ; ಸುಳ್ಳೇ ಬಿಜೆಪಿ ಮನೆ ದೇವರು: CM DK Shivakumar

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ರಕ್ಷಾ ಬಂಧನ: ವಿರಾಟ್ ಕೊಹ್ಲಿ ಸಹೋದರಿಯ ಪೋಸ್ಟ್; ಫೋಟೋ ವೈರಲ್!