ನರಭಕ್ಷ ಹುಲಿ 
ದೇಶ

ನರಭಕ್ಷ ಹುಲಿಗೆ ಕಂಡಲ್ಲಿ ಗುಂಡು ಆದೇಶ!

ಕೊಟ್ಟಾಯಮ್: ಚಿಕ್ಕಮಗಳೂರು ಮಾದರಿಯಲ್ಲೇ ಕೇರಳ ತಮಿಳುನಾಡು ಗಡಿ ಗ್ರಾಮಗಳಲ್ಲಿ ಇಬ್ಬರನ್ನು ಕೊಂದು ಭಯ ಹುಟ್ಟಿಸಿರುವ ನರಭಕ್ಷ ಹುಲಿಯೊಂದನ್ನು ಜೀವಂತ ಸೆರೆ ಅಥವಾ ಗುಂಡಿಕ್ಕಿ ಕೊಲ್ಲುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸೋಮವಾರ ಆರಂಭಿಸಿದೆ.

ಈ ಕಾರ್ಯಾಚರಣೆಯಲ್ಲಿ ಕೇರಳ ಮಾತ್ರವಲ್ಲದೆ, ತಮಿಳು ನಾಡು ಮತ್ತು ಕರ್ನಾಟಕದ ಅರಣ್ಯ ಇಲಾಖೆ ಸಿಬ್ಬಂದಿಯೂ ಪಾಲ್ಗೊಂಡಿದ್ದಾರೆ. ಹುಲಿ ಕೊನೆಯ ಬಾರಿಗೆ ಬಿದಿರ್‍ಕಾಡು ಗ್ರಾಮದಿಂದ 15 ಕಿ.ಮೀ. ದೂರದ ಪೆನ್ನಾ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಹಾಗಾಗಿ 50 ಮಂದಿಯ ಎಸ್ಟಿಎಫ್ ತಂಡ ಕಾರ್ಯಾಚರಣೆಗಿಳಿದಿದೆ.

ಕೇರಳದ ವೈನಾಡಿನ ಟೀ ಎಸ್ಟೇಟ್‍ವೊದಂರಲ್ಲಿ ಭಾನುವಾರ ಈ ಹುಲಿ ಮಹಿಳೆಯೊಬ್ಬಳನ್ನು ಕೊಂದು ಹಾಕಿತ್ತು. ವಾರವೊಂದರಲ್ಲಿ ಈ ಹುಲಿ ಮನುಷ್ಯರ ಮೇಲೆರಗಿದ ಎರಡನೇ ಪ್ರಕರಣ ಇದು. ಇಲ್ಲಿಂದ 5 ಕಿ.ಮೀ. ದೂರದಲ್ಲಿ ಈ ಹುಲಿ ಇದೇ ರೀತಿ ವ್ಯಕ್ತಿಯೊಬ್ಬನನ್ನು ಕೊಂದಿತ್ತು. ಈ ಕಾರಣದಿಂದ ಕೈತಾ, ಪಟ್ಟಾವಾಯಲ್ ಮತ್ತು ಬಿದಿರ್ ಕಾಡು ಗ್ರಾಮಗಳಲ್ಲಿ 3 ದಿನ ನಿಷೇಧಾಜ್ಞೆ ಜಾರಿ ಗೊಳಿಸಲಾಗಿದ್ದು, ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕ ಗಡಿ ಕೂಡ ಈ ಪ್ರದೇಶಗಳಿಗೆ ಸಮೀಪದಲ್ಲೇ ಇದೆ. ಹಾಗಾಗಿ ಕರ್ನಾಟಕದ ಅರಣ್ಯ ಅಧಿಕಾರಿಗಳನ್ನೂ ಈ ಕಾರ್ಯಾಚರಣೆಗೆ ನೆರವು ನೀಡುವಂತೆ ಕೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT