ಖ್ಯಾತ ನಿರ್ಮಾಪಕ ಡಿ ರಾಮಾನಾಯ್ಡು (ಸಂಗ್ರಹ ಚಿತ್ರ) 
ದೇಶ

ಖ್ಯಾತ ನಿರ್ಮಾಪಕ ಡಿ ರಾಮಾನಾಯ್ಡು ನಿಧನ

ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ದಗ್ಗುಬಾಟಿ ರಾಮಾನಾಯ್ಡು ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು..

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ದಗ್ಗುಬಾಟಿ ರಾಮಾನಾಯ್ಡು ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ರಾಮಾನಾಯ್ಡು ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಹೈದರಾಬಾದಿನಲ್ಲಿ ನಿಧನರಾಗಿದ್ದಾರೆ. ತೆಲುಗು ಚಿತ್ರರಂಗದ ಪ್ರಮುಖ ನಿರ್ಮಾಪಕರಲ್ಲಿ ಒಬ್ಬರಾಗಿದ್ದ ರಾಮಾನಾಯ್ಡು ಅವರ ದಿಢೀರ್ ನಿಧನಕ್ಕೆ ತೆಲುಗು ಚಿತ್ರರಂಗ ಕಂಬನಿ ಮಿಡಿದಿದೆ.

1936 ಜೂನ್ 6ರಂದು ಆಂದ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕಾರಂಚೆಡು ಗ್ರಾಮದಲ್ಲಿ ಜನಿಸಿದ ರಾಮಾನಾಯ್ಡು ಅವರು, ಸುರೇಶ್ ಪ್ರೊಡಕ್ಷನ್ಸ್ ಎಂಬ ಚಿತ್ರ ನಿರ್ಮಾಣ ಸಂಸ್ಥೆ ಮೂಲಕ ನೂರಾರು ಚಿತ್ರಗಳನ್ನು ನಿರ್ಮಿಸಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅತ್ಯಧಿಕ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಕೂಡ ರಾಮಾನಾಯ್ಡು ಅವರ ಸುರೇಶ್ ಪ್ರೊಡಕ್ಷನ್ಸ್ ಸಂಸ್ಥೆಗೆ ಇದೆ. ಸುಮಾರು 15 ಭಾಷೆಗಳಲ್ಲಿ 155ಕ್ಕೂ ಅಧಿಕಿ ಚಿತ್ರಗಳನ್ನು ನಿರ್ಮಿಸಿರುವ ರಾಮಾನಾಯ್ಡು ಅವರು, ಅತ್ಯಧಿಕ ಚಿತ್ರಗಳನ್ನು ನಿರ್ಮಾಣ ಮಾಡಿದ ಹಿನ್ನಲೆಯಲ್ಲಿ ಅವರು ಸುರೇಶ್ ಪ್ರೊಡಕ್ಷನ್ಸ್ ಸಂಸ್ಥೆ ಗಿನ್ನೆಸ್ ದಾಖಲೆಗೂ ಪಾತ್ರವಾಗಿತ್ತು.

ಇದಲ್ಲದೆ 1999ರಿಂದ 2004ರವರೆಗೂ ರಾಮಾನಾಯ್ಡು ಅವರು ಸಂಸದರಾಗಿಯೂ ಸೇವೆಸಲ್ಲಿಸಿದ್ದರು. ಅಲ್ಲದೆ ಚಿತ್ರರಂಗದಲ್ಲಿ ಸೇವೆಸಲ್ಲಿಸಿದ ಹಿನ್ನಲೆಯಲ್ಲಿ ಅವರಿಗೆ 2009ರಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು 2012 ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು. ಅವರ ಇಬ್ಬರು ಪುತ್ರರು ಕೂಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದು, ಅವರ ಮೊದಲ ಮಗ ಸುರೇಶ್ ಬಾಬು ಅವರು ತೆಲುಗು ಚಿತ್ರರಂಗದಲ್ಲಿ ಖ್ಯಾತ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇನ್ನು ಅವರ 2ನೇ ಮಗ ವೆಂಕಟೇಶ್ ಅವರು ತೆಲುಗು ಚಿತ್ರರಂಗದ ಪ್ರಮುಖ ನಾಯಕನಟರಾಗಿ ಗುರುತಿಸಿಕೊಂಡಿದ್ದಾರೆ.

ರಾಮಾನಾಯ್ಡು ಅವರ ಮೊಮ್ಮಗ ರಾಣಾ ದಗ್ಗುಬಾಟಿ ಕೂಡ ತೆಲುಗು ಚಿತ್ರರಂಗವಷ್ಟೇ ಅಲ್ಲದೇ ಬಾಲಿವುಡ್ ನಲ್ಲಿಯೂ ಪ್ರಮುಖ ನಟರಾಗಿದ್ದಾರೆ. ಇತ್ತೀಚೆಗ ಬಿಡುಗಡೆಯಾದ ಅಕ್ಷಯ್ ಕುಮಾರ್ ಅಭಿನಯದ ಬೇಬಿ ಚಿತ್ರದಲ್ಲಿ ರಾಣಾ ದಗ್ಗುಬಾಟಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ಒಟ್ಟಾರೆ ರಾಮಾನಾಯ್ಡು ಅವರ ನಿಧನಕ್ಕೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT