ಪ್ರಧಾನಿ ನರೇಂದ್ರ ಮೋದಿ 
ದೇಶ

ಅರುಣಾಚಲ-ದೆಹಲಿ ರೈಲಿಗೆ ಚಾಲನೆ

ಅರುಣಾಚಲ ಪ್ರದೇಶದ ನಹಾರ್‍ಲಗುನ್‍ನಿಂದ ದೆಹಲಿಗೆ ತೆರಳಿದ ನವದೆಹಲಿ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು...

ಇಟಾನಗರ್: ಅರುಣಾಚಲ ಪ್ರದೇಶದ ನಹಾರ್‍ಲಗುನ್‍ನಿಂದ ದೆಹಲಿಗೆ ತೆರಳಿದ ನವದೆಹಲಿ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

ನಹಾರ್‍ಲಗೂನ್‍ನಿಂದ ದೆಹಲಿಗೆ ಇದು ಮೊದಲ ಎಕ್ಸ್ ಪ್ರೆಸ್ ರೈಲಾಗಿದೆ. ಇಂದಿರಾ ಗಾಂಧಿ ಪಾರ್ಕ್ ನಲ್ಲಿ ಆಯೋಜಿಸಿದ್ದ 29ನೇ ರಾಜ್ಯೋತ್ಸವದಲ್ಲಿ ಅವರು ಪಾಲ್ಗೊಂಡಿದ್ದರು. ದೇಶದ ಈಶಾನ್ಯ ಭಾಗದಲ್ಲಿ ಅರುಣಾಚಲ ಕಡಿಮೆ ಜನಸಂಖ್ಯೆ ಇರುವ ದೊಡ್ಡ ರಾಜ್ಯವಾಗಿದೆ. ಇಲ್ಲಿ ಬೆಳವಣಿಗೆಗೆ ಅತ್ಯುತ್ತಮ ಅವಕಾಶವಿದೆ.

ರಾಜ್ಯದಲ್ಲಿ 28 ವರ್ಷಗಳಲ್ಲಿ ಆಗದ ಅಭಿವೃದ್ಧಿಯನ್ನು ಮುಂದಿನ 5 ವರ್ಷಗಳಲ್ಲಿ ನೆರವೇರಿಸುತ್ತೇನೆ ಎಂದು ಜನತೆಗೆ ಭರವಸೆ ನೀಡುತ್ತೇನೆ ಎಂದುಪ್ರಧಾನಿ ತಿಳಿಸಿದರು. ಮೋದಿ ಜೊತೆಯಲ್ಲಿ ರೈಲ್ವೇ ಸಚಿವ ಸುರೇಶ್ ಪ್ರಭು, ರಾಜ್ಯ ರೈಲ್ವೇ ಸಚಿವ ಮನೋಜ್ ಸಿನ್ಹಾ ಮತ್ತು ಗೃಹಸಚಿವ ಕಿರಣ್ ರಿಜೂಜು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ನಹಾರ್ ಲಗೂನ್- ಗುವಾ ಹಟಿ ಇಂಟರ್‍ಸಿಟಿ ರೈಲನ್ನು ಉದ್ಘಾ ಟಿಸಲಾ ಯಿತು. 132 ಕಿಲೋ ವ್ಯಾಟ್ ವಿದ್ಯುತ್ ಪ್ರಸರಣ ಯೋಜನೆಗೆ ಅಡಿಗಲ್ಲು ಹಾಗೂ ಸ್ಥಳೀಯ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆಗೆ ಕೂಡ ಚಾಲನೆ ನೀಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT