ಪ್ರಧಾನಿ ನರೇಂದ್ರ ಮೋದಿ 
ದೇಶ

ಪರೀಕ್ಷೆಯೊಂದೇ ಜೀವನವಲ್ಲ ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು

ಪರೀಕ್ಷೆಯೊಂದೇ ಜೀವನವಲ್ಲ. ಒತ್ತಡಕ್ಕೆ ಒಳಗಾಗದಿರಿ. ಇದು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತದ ವಿದ್ಯಾರ್ಥಿಗಳಿಗೆ ನೀಡಿರುವ ಸಲಹೆ. ಭಾನುವಾರ ಆಕಾಶ ವಾಣಿಯಲ್ಲಿ `ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ...

ನವದೆಹಲಿ: ಪರೀಕ್ಷೆಯೊಂದೇ ಜೀವನವಲ್ಲ. ಒತ್ತಡಕ್ಕೆ ಒಳಗಾಗದಿರಿ. ಇದು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತದ ವಿದ್ಯಾರ್ಥಿಗಳಿಗೆ ನೀಡಿರುವ ಸಲಹೆ. ಭಾನುವಾರ ಆಕಾಶ ವಾಣಿಯಲ್ಲಿ `ಮನ್ ಕಿ ಬಾತ್' ಕಾರ್ಯ ಕ್ರಮದಲ್ಲಿ ಮಾತನಾಡಿದ ಮೋದಿ, `ಈ ಬಾರಿ ನಿಮ್ಮ ಪರೀಕ್ಷೆಯ ಸಿದ್ಧತೆ ವೇಳೆ ನಿಮ್ಮೊಂದಿಗೆ ನಾನಿದ್ದೇನೆ' ಎನ್ನುತ್ತಲೇ ಬಹಳ ಆತ್ಮೀಯತೆಯಿಂದ ಮಕ್ಕಳನ್ನು ತನ್ನತ್ತ ಸೆಳೆದರು.

ತಾವು ವಿದ್ಯಾರ್ಥಿಯಾಗಿದ್ದಾಗಿನ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿನ ಒತ್ತಡ ಕಡಿಮೆ ಮಾಡಲು ಯತ್ನಿಸಿದರು. ನಾನೇನೂ ಅತ್ಯದ್ಭುತ ವಿದ್ಯಾರ್ಥಿಯಾಗಿರಲಿಲ್ಲ. ನನ್ನ ಕೈಬರಹವಂತೂ ಅಧ್ಯಾಪಕರಿಗೆ ಅರ್ಥವೇ ಆಗುತ್ತಿರಲಿಲ್ಲ. ಒಳ್ಳೆಯ ಅಂಕ ಪಡೆದೇ ಇಲ್ಲ ಎಂದ ಪ್ರಧಾನಿ ಮೋದಿ, ಒತ್ತಡ, ಚಿಂತೆಯಿಲ್ಲದೆ ಪರೀಕ್ಷೆಗೆ ಸಿದ್ಧರಾಗಿ. ನಿಜವಾದ ಸ್ಪರ್ಧೆಯಿಂದಷ್ಟೇ ಯಶಸ್ಸು ಗಳಿಸಲು ಸಾಧ್ಯ ಎಂದರು.

ಇದೇ ವೇಳೆ, ಪೋಲ್ ವಾಲ್ಟ್ ಪಟು ಸರ್ಗೀ ಬುಬ್ಕಾರ ಸಾಧನೆಯನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಬುಬ್ಕಾ ಅವರು 35 ಬಾರಿ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ. ನೀವೂ ಅಷ್ಟೆ, ನಿಮ್ಮನ್ನು ನಿಮಗೇ ಹೋಲಿಕೆ ಮಾಡಿಕೊಂಡು ಯಶಸ್ಸಿನತ್ತ ಹೆಜ್ಜೆಹಾಕಿ ಎಂದು ಕಿವಿಮಾತು ಹೇಳಿದರು. ಈ ನಡುವೆ, ಹೆತ್ತವರಿಗೂ ಸಲಹೆ ನೀಡಿದ ಅವರು, ನಿಮ್ಮ ಮಕ್ಕಳನ್ನು ಇತರರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT