ಅರವಿಂದ್ ಕೇಜ್ರಿವಾಲ್- ಅಣ್ಣಾ ಹಜಾರೆ 
ದೇಶ

ಹಜಾರೆಯನ್ನು ದೆಹಲಿ ಸಚಿವಾಲಯಕ್ಕೆ ಆಹ್ವಾನಿಸಿದ ಕೇಜ್ರಿವಾಲ್

ಅಣ್ಣಾ ಹಜಾರೆ ಆಗಮನದಿಂದ ದೆಹಲಿ ಸಚಿವಾಲಯ ಶುದ್ಧವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್..

ನವದೆಹಲಿ: ಅಣ್ಣಾ ಹಜಾರೆ ಆಗಮನದಿಂದ ದೆಹಲಿ ಸಚಿವಾಲಯ ಶುದ್ಧವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.

ಮಂಗಳವಾರ ಅಣ್ಣಾ ಹಜಾರೆಯೊಂದಿಗೆ ಧರಣಿಯಲ್ಲಿ ಪಾಲ್ಗೊಂಡಿದ್ದ ಕೇಜ್ರಿವಾಲ್, ಅಣ್ಣಾ ಹಜಾರೆಯವರಿಗೆ ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದ್ದಾರೆ.

ಅಣ್ಣಾ ಆಗಮನದಿಂದ ಒಳ್ಳೆಯ ಕೆಲಸಕ್ಕೆ ಸ್ಫೂರ್ತಿ ಸಿಗಲಿದ್ದು, ಸಚಿವಾಲಯ ಶುದ್ಧವಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಭೂಸ್ವಾಧೀನ ಸುಗ್ರೀವಾಜ್ಞೆ ವಿರೋಧಿಸಿದ ಕೇಜ್ರಿವಾಲ್, ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ತುಂಬಾ ಅಹಂಕಾರವಿತ್ತು. ಜನತೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಾಂಗ್ರೆಸ್‌ಗಿಂತ ಒಂದು ಹೆಜ್ಜೆ ಮುಂದಿದ್ದು, ಇಂತಹ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಕೇಜ್ರಿವಾಲ್‌ಗೆ ಸಾಥ್ ನೀಡಿದ್ದ ಮನೀಷ್ ಸಿಸೋಡಿಯಾ ಅವರು ಮಾತನಾಡಿ, ಅಣ್ಣಾ ಹಜಾರೆ ಅವರೊಂದಿಗೆ ಚುನಾವಣೆ ಫಲಿತಾಂಶ ಹಾಗೂ ಭೂ ಸ್ವಾಧೀನ ಸುಗ್ರೀವಾಜ್ಞೆ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT