ದೇಶ

ಗೌಪ್ಯ ಮಾಹಿತಿ ಸೋರಿಕೆ: ಮತ್ತೋರ್ವ ಆರೋಪಿ ಬಂಧನ

ಕೇಂದ್ರ ಸರ್ಕಾರದ ಮಹತ್ವ ದಾಖಲೆಗಳನ್ನು ಕದ್ದು ಪ್ರಮುಖ ತೈಲ ಕಂಪನಿಗಳು ಹಾಗೂ ಸ್ವತಂತ್ರ ಸಲಹೆಗಾರರಿಗೆ ಪೂರೈಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ರಕ್ಷಣಾ ಸಚಿವಾಲಯದ...

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವ ದಾಖಲೆಗಳನ್ನು ಕದ್ದು ಪ್ರಮುಖ ತೈಲ ಕಂಪನಿಗಳು ಹಾಗೂ ಸ್ವತಂತ್ರ ಸಲಹೆಗಾರರಿಗೆ ಪೂರೈಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ರಕ್ಷಣಾ ಸಚಿವಾಲಯದ ಕೆಲಸಗಾರನೊಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ.

ವೀರೇಂದ್ರ ಕುಮಾರ್ ಎಂಬಾತ ರಕ್ಷಣಾ ಸಚಿವಾಲಯದ ಗುಮಾಸ್ತನಾಗಿ ಕಾರ್ಯನಿರ್ವಹಿಸುತ್ತಿದ್ದ. ಈತ ನಕಲಿ ಗುರುತಿನ ಚೀಟಿಯೊಂದಿಗೆ ಗೌಪ್ಯ ಮಾಹಿತಿಯ ದಾಖಲೆಗಳನ್ನು ಲಲ್ತಾ ಪ್ರಸಾದ್ ಎಂಬುವವರಿಗೆ ನೀಡುತ್ತಿದ್ದರು ಎಂಬ ಆರೋಪದ ಮೇಲೆ ಪೊಲೀಸರು ವೀರೇಂದ್ರ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ದೇಶದ ಮಹತ್ವದ ದಾಖಲೆಗಳನ್ನು ಕದ್ದು ತೈಲ ಕಂಪನಿ ಹಾಗೂ ಖಾಸಗಿ ಸಲಹೆಗಾರರಿಗೆ ಮಾರಾಟ ಮಾಡಿ ಹಣಗಳಿಸುತ್ತಿದ್ದ ಈ ದಂಧೆ ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿತ್ತು. ಈ ವಿದ್ರೋಹದ ವ್ಯವಹಾರದಲ್ಲಿ ಸುಮಾರು 9 ತೈಲ ಕಂಪನಿಗಳು ಭಾಗಿಯಾಗಿರುವುದಾಗಿ ಕಂಡು ಬಂದಿ ಹಿನ್ನೆಲೆಯಲ್ಲಿ, ಪೊಲೀಸರು ದೆಹಲಿಯಾದ್ಯಂತ ಹಲವು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಈವರೆಗೂ 13 ಆರೋಪಿಗಳನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT