ದೇಶ

ಗೌಪ್ಯ ಮಾಹಿತಿ ಸೋರಿಕೆ: ಮತ್ತೋರ್ವ ಆರೋಪಿ ಬಂಧನ

ಕೇಂದ್ರ ಸರ್ಕಾರದ ಮಹತ್ವ ದಾಖಲೆಗಳನ್ನು ಕದ್ದು ಪ್ರಮುಖ ತೈಲ ಕಂಪನಿಗಳು ಹಾಗೂ ಸ್ವತಂತ್ರ ಸಲಹೆಗಾರರಿಗೆ ಪೂರೈಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ರಕ್ಷಣಾ ಸಚಿವಾಲಯದ...

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವ ದಾಖಲೆಗಳನ್ನು ಕದ್ದು ಪ್ರಮುಖ ತೈಲ ಕಂಪನಿಗಳು ಹಾಗೂ ಸ್ವತಂತ್ರ ಸಲಹೆಗಾರರಿಗೆ ಪೂರೈಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ರಕ್ಷಣಾ ಸಚಿವಾಲಯದ ಕೆಲಸಗಾರನೊಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ.

ವೀರೇಂದ್ರ ಕುಮಾರ್ ಎಂಬಾತ ರಕ್ಷಣಾ ಸಚಿವಾಲಯದ ಗುಮಾಸ್ತನಾಗಿ ಕಾರ್ಯನಿರ್ವಹಿಸುತ್ತಿದ್ದ. ಈತ ನಕಲಿ ಗುರುತಿನ ಚೀಟಿಯೊಂದಿಗೆ ಗೌಪ್ಯ ಮಾಹಿತಿಯ ದಾಖಲೆಗಳನ್ನು ಲಲ್ತಾ ಪ್ರಸಾದ್ ಎಂಬುವವರಿಗೆ ನೀಡುತ್ತಿದ್ದರು ಎಂಬ ಆರೋಪದ ಮೇಲೆ ಪೊಲೀಸರು ವೀರೇಂದ್ರ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ದೇಶದ ಮಹತ್ವದ ದಾಖಲೆಗಳನ್ನು ಕದ್ದು ತೈಲ ಕಂಪನಿ ಹಾಗೂ ಖಾಸಗಿ ಸಲಹೆಗಾರರಿಗೆ ಮಾರಾಟ ಮಾಡಿ ಹಣಗಳಿಸುತ್ತಿದ್ದ ಈ ದಂಧೆ ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿತ್ತು. ಈ ವಿದ್ರೋಹದ ವ್ಯವಹಾರದಲ್ಲಿ ಸುಮಾರು 9 ತೈಲ ಕಂಪನಿಗಳು ಭಾಗಿಯಾಗಿರುವುದಾಗಿ ಕಂಡು ಬಂದಿ ಹಿನ್ನೆಲೆಯಲ್ಲಿ, ಪೊಲೀಸರು ದೆಹಲಿಯಾದ್ಯಂತ ಹಲವು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಈವರೆಗೂ 13 ಆರೋಪಿಗಳನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT