ಉದ್ದವ್ ಠಾಕ್ರೆ 
ದೇಶ

ಮದರ್ ತೆರೇಸಾ ಮತಾಂತರ ಹುನ್ನಾರ: ಭಾಗವತ್ ಹೇಳಿಕೆಗೆ ಶಿವಸೇನೆ ಸಮರ್ಥನೆ

ಮುಂಬೈ: ನೊಬಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮದರ್ ತೆರೇಸಾ ಸೇವೆಯ ಹಿಂದೆ ಮತಾಂತರ ಹುನ್ನಾರವಿತ್ತು ಎಂಬ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ರ ವಿವಾದಾತ್ಮಕ ಹೇಳಿಕೆಯನ್ನು ಶಿವಸೇನೆ ಸಮರ್ಥಿಸಿಕೊಂಡಿದೆ.

ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿರುವ ಶಿವಸೇನೆ, ಭಾರತಕ್ಕೆ ಬಂದ ಎಲ್ಲಾ ಮಿಷನರಿಗಳ ಉದ್ದೇಶ ಮತಾಂತರವೇ ಆಗಿತ್ತು. ಹೀಗಾಗಿ ಮೋಹನ್ ಭಾಗವತ್ ರ ಹೇಳಿಕೆ ಸರಿಯಾಗಿದೆ ಎಂದು ಹೇಳಿಕೊಂಡಿದೆ.

ರಾಜಸ್ಥಾನದ ಭರತ್‌ಪುರ್‌ದ ಸಮಾರಂಭವೊಂದರಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಮದರ್ ತೆರೇಸಾ ಅವರ ಸೇವೆ ನಿಸ್ವಾರ್ಥವಾಗಿತ್ತು. ಆದರೆ ಆ ಸೇವೆಯ ಹಿಂದಿನ ಉದ್ದೇಶ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದೇ ಆಗಿತ್ತು ಎಂದು ಹೇಳಿದ್ದರು. ಈ ಹೇಳಿಕೆಗೆ ದೇಶದೆಲ್ಲಡೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷಗಳು ಸೇರಿದಂತೆ ಪ್ರತಿಪಕ್ಷಗಳು ಭಾಗವತ್ ವಿರುದ್ಧ ಹಾರಿಹಾಯ್ದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT