ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ 
ದೇಶ

ಶೀಘ್ರದಲ್ಲೇ ರಸಗೊಬ್ಬರ ಸಬ್ಸಿಡಿ ನೇರ ರೈತರ ಖಾತೆಗೆ

ಕೇಂದ್ರ ಸರ್ಕಾರ ರಸಗೊಬ್ಬರ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಪಾವತಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ...

ನವದೆಹಲಿ: ಕೇಂದ್ರ ಸರ್ಕಾರ ರಸಗೊಬ್ಬರ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಪಾವತಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ.

ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಮಂಗಳವಾರ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆ ಹಲವು ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಅನಂತ ಕುಮಾರ್, ಈಗಾಗಲೇ ಅಡುಗೆ ಅನಿಲ ಸಬ್ಸಿಡಿಯನ್ನು ನೇರವಾಗಿ ಗ್ರಾಹಕರ ಖಾತೆಗೆ ಪಾವತಿಸುತ್ತಿರುವಂತೆ, ರೈತರ ಖಾತೆಗೂ ನೇರವಾಗಿ ರಸಗೊಬ್ಬರ ಸಬ್ಸಿಡಿ ಹಣ ಪಾವತಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಸಬ್ಸಿಡಿ ಹಣ ಪೊಲಾಗದಂತೆ ನೇರ ರೈತರಿಗೆ ತಲುಪಬೇಕೆಂಬುದು ಪ್ರಧಾನಿಯ ಆಶಯವಾಗಿದೆ ಎಂದಿದ್ದಾರೆ.

ಕೊರತೆ ಇಲ್ಲ: ರಾಷ್ಟ್ರದಲ್ಲಿ ಎಲ್ಲೂ ರಸಗೊಬ್ಬರ ಕೊರತೆ ಇಲ್ಲ. ಪ್ರತಿ ತಿಂಗಳು ಆಯಾ ರಾಜ್ಯಗಳಿಗೆ ಎಷ್ಟು ಅಗತ್ಯವಿದೆಯೋ ಅಷ್ಟನ್ನು ಸಕಾಲದಲ್ಲಿ ತಲುಪಿಸಲಾಗಿದೆ. ನಮಗೆ ಯೂರಿಯಾ31 ದಶಲಕ್ಷಟನ್, ಡಿಎಪಿ, ಎಂಒಪಿ ಇತರೆ ರಸಗೊಬ್ಬರ 30 ದಶಲಕ್ಷ ಟನ್ ಅಗತ್ಯವಿದ್ದು ಅಷ್ಟನ್ನೂ ಒದಗಿಸಲಾಗಿದೆ. ಮಹಾರಾಷ್ಟ್ರ ಸೇರಿದಂತೆ ಯಾವ ರಾಜ್ಯಕ್ಕೂ ರಸಗೊಬ್ಬರ ಕೊರತೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT