ಲೋಕಸಭೆ 
ದೇಶ

ಬೇಹು: ಜೆಪಿಸಿ ತನಿಖೆಗೆ ಒತ್ತಾಯ

ಕಾರ್ಪೊರೇಟ್ ಬೇಹುಗಾರಿಕೆ ಪ್ರಕರಣ ಸಂಸತ್‍ನಲ್ಲೂ ಪ್ರತಿಧ್ವನಿಸಿದೆ. ಪೆಟ್ರೋಲಿಯಂ, ವಿದ್ಯುತ್, ಕಲ್ಲಿದ್ದಲು ಮತ್ತು ರಕ್ಷಣಾ ಸಚಿವಾಲಯಗಳಲ್ಲಿ ನಡೆದಿದೆಯೆನ್ನಲಾದ ಬೇಹುಗಾರಿಕೆ ಬಗ್ಗೆ ತನಿಖೆ...

ನವದೆಹಲಿ: ಕಾರ್ಪೊರೇಟ್ ಬೇಹುಗಾರಿಕೆ ಪ್ರಕರಣ ಸಂಸತ್‍ನಲ್ಲೂ ಪ್ರತಿಧ್ವನಿಸಿದೆ. ಪೆಟ್ರೋಲಿಯಂ, ವಿದ್ಯುತ್, ಕಲ್ಲಿದ್ದಲು ಮತ್ತು ರಕ್ಷಣಾ ಸಚಿವಾಲಯಗಳಲ್ಲಿ ನಡೆದಿದೆಯೆನ್ನಲಾದ ಬೇಹುಗಾರಿಕೆ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ರಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಲೋಕಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಸರ್ಕಾರವು ಬೇಹು ಪ್ರಕರಣಕ್ಕೆ ಸಂಬಂಧಿಸಿ ಮೌನವಹಿಸಿದೆ. ಸತ್ಯ ಹೊರ ಬರಬೇಕೆಂದರೆ ಜೆಪಿಸಿ ರಚಿಸಲೇಬೇಕು ಎಂದಿದ್ದಾರೆ. ಇದೇ ವೇಳೆ, ಬೇಹುಗಾರಿಕೆ ಆರೋಪಿಗಳಿಗೆ ನಕಲಿ ಗುರುತಿನ ಚೀಟಿ ಒದಗಿಸಿದ್ದ ಆರೋಪದಲ್ಲಿ ರಕ್ಷಣಾ ಸಚಿವಾಲಯದ ಸಿಬ್ಬಂದಿಯೊಬ್ಬನನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಈತನನ್ನು ದೆಹಲಿ ನ್ಯಾಯಾಲಯ ದಿನದ ಮಟ್ಟಿಗೆ ಪೊಲೀಸ್ ವಶಕ್ಕೊಪ್ಪಿಸಿದೆ. ಇತರೆ 5 ಮಂದಿ ಕಾರ್ಪೊರೇಟ್ ಅಧಿಕಾರಿಗಳ ನ್ಯಾಯಾಂಗ ಬಂಧನವನ್ನು ಮಾ.5ರವರೆಗೆ ವಿಸ್ತರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT