ನರೇಂದ್ರ ಮೋದಿ 
ದೇಶ

ರೈತ ವಿರೋಧಿ ಅಂಶ ಇದ್ದರೆ, ಭೂಸ್ವಾಧೀನ ಮಸೂದೆ ಬದಲಾವಣೆಗೆ ಸಿದ್ಧ: ಮೋದಿ

ಉದ್ದೇಶಿತ ಭೂಸ್ವಾಧೀನ ಮಸೂದೆಯಲ್ಲಿ ಯಾವುದೇ ರೈತ ವಿರೋಧಿ ಅಂಶಗಳು ಪತ್ತೆಯಾದರೆ, ಮಸೂದೆಯಲ್ಲಿ ಬದಲಾವಣೆ ಮಾಡಲು ತಾವು ಸಿದ್ಧವಿರುವುದಾಗಿ ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಉದ್ದೇಶಿತ ಭೂಸ್ವಾಧೀನ ಮಸೂದೆಯಲ್ಲಿ ಯಾವುದೇ ರೈತ ವಿರೋಧಿ ಅಂಶಗಳು ಪತ್ತೆಯಾದರೆ, ಮಸೂದೆಯಲ್ಲಿ ಬದಲಾವಣೆ ಮಾಡಲು ತಾವು ಸಿದ್ಧವಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ, ಮೊದಲು ಭೂಸ್ವಾಧೀನ ಮಸೂದೆಯಲ್ಲಿನ ಅಂಶಗಳನ್ನು ತಿಳಿಯುವ ಕೆಲಸ ಮಾಡಿ. ಭೂಸ್ವಾಧೀನ ತಿದ್ದುಪಡಿ ಮಸೂದೆ ಮಾಡಿದ್ದೇ ರೈತರ ಸ್ಥಿತಿಯನ್ನು ಸುಧಾರಿಸಲು. ಇದರಿಂದ ಮೂಲಭೂತ ಸೌಲಭ್ಯಕ್ಕೆ ಮತ್ತು ಕೈಗಾರಿಕೆಗಳಿಗೆ ಸುಲಭವಾಗಿ ಭೂಮಿ ವಶಪಡಿಸಿಕೊಳ್ಳಬಹುದು ಎಂಬುದು ಸುಳ್ಳು ಎಂದಿದ್ದಾರೆ.

ಭೂಸ್ವಾಧೀನ ಮಸೂದೆಯಲ್ಲಿ ಹಲವಾರು ಲೋಪದೋಷಗಳಿವೆ. ದಶಕಗಳ ಲೋಪದೋಷಗಳನ್ನು ನಾವು ಸರಿಪಡಿಸಬೇಕಿದೆ. ಈ ಮಸೂದೆ ಸಂಬಂಧ ನಾವು ಮುಖ್ಯಮಂತ್ರಿಗಳನ್ನು ಸಂಪರ್ಕಿಸಿಲ್ಲ ಎಂದು ಹೇಳಿದವರು ಯಾರು ಎಂದು ವಿರೋಧ ಪಕ್ಷಗಳನ್ನು ಪ್ರಧಾನಿ ಪ್ರಶ್ನಿಸಿದರು.

ಮಸೂದೆಯಿಂದಾಗಿ ನಿಜವಾಗಿಯೂ ರೈತರಿಗೆ ತೊಂದರೆಯಾದಲ್ಲಿ ಭೂ ಸ್ವಾಧೀನ ಮಸೂದೆ ಬದಲಾವಣೆ ಮಾಡಲು ಸಿದ್ಧ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT