ರಾಬರ್ಟ್‌ವಾದ್ರಾ 
ದೇಶ

ವಾದ್ರಾ ಭೂ ಅವ್ಯವಹಾರ: ಹೊಸ ತನಿಖೆಗೆ ಆದೇಶ

ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ವಾದ್ರಾ ತಮ್ಮ ಒಡೆತನದ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ವಾದ್ರಾ ತಮ್ಮ ಒಡೆತನದ ಡಿಎಲ್‌ಎಫ್‌ರಿಯಲ್ ಎಸ್ಟೇಟ್ ಸಂಸ್ಥೆ ಮೂಲಕ ನಡೆಸಿರುವ ಭೂ ಅವ್ಯವಹಾರ ಪ್ರಕರಣವನ್ನು ಹರಿಯಾಣ ಸರ್ಕಾರ ಮರು ತನಿಖೆಗೆ ಆದೇಶ ನೀಡಿದೆ.

ಈ ಮೂಲಕ ರಾಬರ್ಟ್ ವಾದ್ರಾ ಮತ್ತು ಪ್ರಿಯಾಂಕಾ ಗಾಂಧಿಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ. ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಅವರು ಭೂ ಅವ್ಯವಹಾರ ಪ್ರಕರಣದ ಹೊಸ ತನಿಖೆಗೆ ಆದೇಶ ಮಾಡಿದ್ದಾರೆ.

ಹಿಂದಿನ ಹರಿಯಾಣ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಅವರು ಕಾನೂನು ಬಾಹಿರವಾಗಿ ಗುರ್‌ಗಾಂವ್ ಬಳಿ 350 ಎಕರೆಯನ್ನು ವಾದ್ರಾ ಅವರಿಗೆ ಮಂಜೂರು ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಬಿಜೆಪಿ ನೂತನ ಸರ್ಕಾರ ವಾದ್ರಾ ವಿರುದ್ಧ ಹೊಸ ತನಿಖೆಗೆ ಆದೇಶ ಮಾಡಿದೆ. ಭ್ರಷ್ಟಾಚಾರವನ್ನು ಮತ್ತು ಅವ್ಯವಹಾರಗಳನ್ನು ಹತ್ತಿಕ್ಕುವ ಕೆಲಸ ನಮ್ಮ ಸರ್ಕಾರ ಗುರಿಯಾಗಿದೆ. ಜನತೆಗೆ ನ್ಯಾಯಾ ಒದಗಿಸುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT