ಸಾಂದರ್ಭಿಕ ಚಿತ್ರ 
ದೇಶ

ಬೆಂಗಳೂರು ದರ್ಶಿನಿ

ಪ್ರವಾಸಿಗರ ಹಾಗೂ ಸಾರ್ವಜನಿಕರ...

ಬೆಂಗಳೂರು: ಪ್ರವಾಸಿಗರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 'ಬೆಂಗಳೂರು ದರ್ಶಿನಿ' ಎಂಬ ನೂತನ ಸೇವೆ ಆರಂಭಿಸಲಿದೆ. ಅಲ್ಲದೆ, ಕೆಂಪೇಗೌಡ ಬಸ್ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡೆರಹಿತ ವಾಯುವಜ್ರ ಸೇವೆಯನ್ನು ಪ್ರಾರಂಭಿಸಲಿದೆ. ಇದೇ ಜ.7ರಿಂದ ಈ ಸೇವೆಗಳು ಆರಂಭವಾಗಲಿವೆ.

ನಗರ ದರ್ಶನಕ್ಕಾಗಿ 'ಬೆಂಗಳೂರು ದರ್ಶಿನಿ' ಆರಂಭಿಸುವ ಉದ್ದೇಶದಿಂದ ಈ ಹಿಂದಿದ್ದ 'ಹಾಫ್-ಆನ್-ಹಾಫ್-ಹಾಫ್‌' (ನಗರ ಪ್ರದಕ್ಷಿಣೆಯ 7 ಬಸ್) ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಗಳು, 'ಬೆಂಗಳೂರು ದರ್ಶಿನಿ' ಎಂಬ ಹೆಸರಡಿ ಎರಡು ಹವಾನಿಯಂತ್ರಿತ ವಾಹನ ಕಾರ್ಯಾಚರಣೆ ನಡೆಸುತ್ತದೆ. ಈ ಬಸ್‌ಗಳು ಮೆಜೆಸ್ಟಿಕ್‌ನಿಂದ ಹೊರಟು ಪ್ರವಾಸಿಗರನ್ನು ನಗರದ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೆ ಕರೆದೊಯ್ದು ಮತ್ತದೇ ಸ್ಥಳಕ್ಕೆ ತಂದು ಬಿಡುತ್ತವೆ. ಒಂದೇ ವಾಹನದಲ್ಲಿ ವೀಕ್ಷಿಸಬಹುದು. ಈ ಬಸ್‌ಗಳಲ್ಲಿ ಪ್ರಯಾಣಿಸುವ ವಯಸ್ಕರಿಗೆ 400, ಮಕ್ಕಳಿಗೆ 300 ಪ್ರಯಾಣ ದರ ನಿಗದಿಗೊಳಿಸಲಾಗಿದೆ. ಈ ಸೇವೆಯ ಮುಂಗಡ ಟಿಕೆಟ್ ಅನ್ನು ಕಾಯ್ದಿರಿಸುವ ಸೌಲಭ್ಯವನ್ನು ನೀಡಲಾಗಿದೆ ಎಂದರು.

ಬಸ್ ಮಾರ್ಗ: ಬೆಂಗಳೂರು ದರ್ಶಿನಿ-1:

ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳಗ್ಗೆ 8.45ಕ್ಕೆ ಪ್ರಾರಂಭವಾಗಿ ನಗರದ ಪ್ರಮುಖ ಪ್ರವಾಸಿ ಸ್ಥಳಗಳಾದ ಟಿಪ್ಪು ಅರಮನೆ, ದೊಡ್ಡಬಸವಣ್ಣ ದೇವಸ್ಥಾನ, ಗವಿಗಂಗಾಧರೇಶ್ವ ದೇವಸ್ಥಾನ, ಬನಶಂಕರಿ ದೇವಸ್ಥಾನ, ಲಾಲ್‌ಬಾಗ್, ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯ, ಕಬ್ಬನ್‌ಪಾರ್ಕ್, ವಿಧಾನಸೌಧ, ಜವಹರಲಾಲ್ ನೆಹರು ತಾರಾಲಯ, ಇಂದಿರಾಗಾಂಧಿ ಸಂಗೀತ ಕಾರಂಜಿ, ಇಸ್ಕಾನ್, ಪ್ರಸನ್ನ ಆಂಜನೆಯ ದೇವಸ್ಥಾನದ ಮೂಲಕ ಪುವಾ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಮ.2 ಕ್ಕೆ ಬಂದು ತಲುಪುತ್ತದೆ.

ಬೆಂಗಳೂರು ದರ್ಶಿನಿ-2:
ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳಗ್ಗೆ 8.45ಕ್ಕೆ ಪ್ರಾರಂಭವಾಗಿ ಇಸ್ಕಾನ್ ಪ್ರಸನ್ನ ಆಂಜನೆಯ ದೇವಸ್ಥಾನ, ಜವಹರಲಾಲ್ ನೆಹರು ತಾರಾಲಯ, ಇಂದಿರಾಗಾಂಧಿ ಸಂಗೀತ ಕಾರಂಜಿ, ಕಬ್ಬನ್ ಪಾರ್ಕ್, ವಿಧಾನಸೌಧ, ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯ, ಲಾಲ್‌ಬಾಗ್, ಬನಶಂಕರಿ ದೇವಸ್ಥಾನ, ದೊಡ್ಡಬಸವಣ್ಣ ದೇವಸ್ಥಾನ, ಗವಿಗಂಗಾಧರೇಶ್ವರ ದೇವಸ್ಥಾನ, ಟಿಪ್ಪು ಅರಮನೆ ಮೂಲಕ ಮತ್ತೆ ಕೆಂಪೇಗೌಡ ಬಸ್ ನಿಲ್ದಾಣಕ್ಕೆ 7.50ಕ್ಕೆ ಬಂದು ತಲುಪುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT