ಅಭಿಷೇಕ್ ಬ್ಯಾನರ್ಜಿಗೆ ಅಪರಿಚಿತ ವ್ಯಕ್ತಿಯಿಂದ ಕಪಾಳಮೋಕ್ಷ, 
ದೇಶ

ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಕಪಾಳಮೋಕ್ಷ

ಚಂಡಿಪುರ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿಗೆ ಅಪರಿಚಿತ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ್ದಾನೆ.

ತೃಣಮೂಲ ಕಾಂಗ್ರೆಸ್‌ನ ಸದಸ್ಯನಾಗಿರುವ ಅಭಿಷೇಕ್ ಬ್ಯಾನರ್ಜಿ ಇಂದು ಮಧ್ಯಾಹ್ನ ಚಂಡಿಪುರ್‌ನ ಪಶ್ಚಿಮ ಮಿಡ್ನಾಪುರ್ ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅಭಿಷೇಕ್‌ರೊಂದಿಗೆ ಪೋಟೋ ತೆಗೆದುಕೊಳ್ಳುವ ನೆಪ ಹೇಳಿ ಅಪರಿಚಿತ ವ್ಯಕ್ತಿ ವೇದಿಕೆಗೆ ಬಂದಿದ್ದಾನೆ.

ವೇದಿಕೆ ಮೇಲೆ ಮಾತನಾಡುತ್ತಿದ್ದ ಸಂದರ್ಭದಲ್ಲೇ ಬಲವಾಗಿ ಅಭಿಷೇಕ್ ಮುಖಕ್ಕೆ ಗುದ್ದಿದ್ದಾರೆ. ಕೂಡಲೇ ವೇದಿಕೆ ಮೇಲಿದ್ದ ಟಿಎಂಸಿ ಸದಸ್ಯರು ವ್ಯಕ್ತಿಗೆ ಇಗ್ಗಾಮುಗ್ಗ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾವ ಕಾರಣಕ್ಕಾಗಿ ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂಬುದು ತಿಳಿದುಬಂದಿಲ್ಲ. ಅಪರಿಚಿತ ವ್ಯಕ್ತಿ ಪಕ್ಷದ ಕಾರ್ಯಕರ್ತನಲ್ಲ. ಹೊರಗಿನವನಾಗಿದ್ದು, ಶೀಘ್ರವಾಗಿ ಕಾರಣ ತಿಳಿಯಲಾಗುವುದು ಎಂದು ಪಕ್ಷದ ಮುಖಂಡ ಸುವೇನ್ದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT